Chikmagaluru News

ಶೃಂಗೇರಿ ; ಹುಲುಗಾರುಬೈಲು ಅರಣ್ಯ ಪ್ರದೇಶದಲ್ಲಿ ಬಂದೂಕು ಪತ್ತೆ !

ಶೃಂಗೇರಿ ; ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹುಲಗಾರುಬೈಲು ಅರಣ್ಯದಲ್ಲಿ ಬಂದೂಕೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
Instagram Group Join Now

ಹುಲಗಾರುಬೈಲು ಅರಣ್ಯದ ನಡುವೆ ಒಂದು ನಾಡ ಬಂದೂಕು, 18 ಖಾಲಿ ಕಾಟ್ರೇಜ್ ಪತ್ತೆಯಾಗಿದೆ. ಬಂದೂಕನ್ನು ಕಾಡಿನಲ್ಲಿ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶೃಂಗೇರಿ ಪೊಲೀಸರು ನಾಡ ಬಂದೂಕು ಸೇರಿದಂತೆ 18 ಖಾಲಿ ಕಾಟ್ರೇಜ್ ವಶಕ್ಕೆ ಪಡೆದಿದ್ದಾರೆ.

ನಕ್ಸಲರ ಶರಣಾಗತಿ ಬೆನ್ನಲ್ಲೇ ಕಾಡಿನಲ್ಲಿ ಬಂದೂಕು ಪತ್ತೆಯಾಗಿದೆ. ಕಳೆದ ಶನಿವಾರ ನಕ್ಸಲ್‌ ರವೀಂದ್ರ ಶಸ್ತ್ರ ರಹಿತವಾಗಿ ಶರಣಾಗತಿಯಾಗಿದ್ದ. ರವೀಂದ್ರ ಬಳಿ ಇದ್ದ ಶಸ್ತ್ರ ಇದೀಗ ಪತ್ತೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶರಣಾಗತಿ ಮುನ್ನ ರವೀಂದ್ರ ಕಾಡಿನಲ್ಲಿ ಎಸೆದಿರಬಹುದು ಎನ್ನಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಎನ್‌ ಆರ್‌ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಈ ಹಿಂದೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಕಾಡಿನ ನಡುವೆ ಭೂಮಿಯೊಳಗೆ ಹೂತುಹಾಕಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು. ಈ ವೇಳೆ ಎಕೆ56 ಸೇರಿದಂತೆ 6 ಬಂದೂಕು ಜೀವಂತ ಮದ್ದುಗುಂಡು ಪತ್ತೆಯಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]