HOSANAGARA | ಪರಿಸರ ಮಿತ್ರ, ತಾಲೂಕಿನ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿಗಳಿಗೆ ಪಾತ್ರವಾಗಿದ್ದ ಹಚ್ಚ ಹಸಿರಿನ ಅತ್ಯುತ್ತಮ ಉದ್ಯಾನವನ, ಪರಿಸರ ಕಲಿಕೆ, ಬಾಲವನವನ್ನು ಹೊಂದಿರುವ ಹುಂಚ ಗ್ರಾಪಂ ವ್ಯಾಪ್ತಿಯ ಸ.ಕಿ.ಪ್ರಾ. ಶಾಲೆ ಹಡ್ಲುಬೈಲು (Hadlubailu) ಮತ್ತೊಂದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಇತ್ತೀಚೆಗೆ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ನೀಡಿದ್ದು, ಇದು 40 ಮಾನದಂಡಗಳನ್ನು ಹೊಂದಿರುವ ಶಾಲೆಗಳಿಗೆ ನೀಡಲಾಯಿತು.

ಈ ಪ್ರಶಸ್ತಿಯನ್ನು ಸಂಸ್ಥಾಪಕ ಸದ್ಗುರು ಮಧುಸೂದನ್ ಸಾಯಿರವರು ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಹೆಚ್.ವೈ. ರವರಿಗೆ ಪ್ರದಾನ ಮಾಡಿದರು.

ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ 10 ಸಾವಿರ ರೂ. ನಗದು, 8 ಸಾವಿರ ರೂ. ಬೆಲೆಯ ಗ್ರಂಥಾಲಯ ಪುಸ್ತಕಗಳು, ದಿನಚರಿಗಳು, ಎಲ್ಲಾ ಮಕ್ಕಳಿಗೂ ಚಾಕೊಲೇಟ್ ಹಾಗೂ ಮುಖ್ಯ ಶಿಕ್ಷಕರಿಗೆ ಕೈಗಡಿಯಾರವನ್ನೊಳಗೊಂಡಿದೆ.

ಈ ಕುರಿತು ಮುಖ್ಯ ಶಿಕ್ಷಕ ಚಂದ್ರಶೇಖರ ಪ್ರತಿಕ್ರಿಯೆ ನೀಡಿ, ಕಾಡಂಚಿನ ಕುಗ್ರಾಮದಲ್ಲಿರುವ ಹಡ್ಲುಬೈಲು ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ನಮಗೆ ಸಂಭ್ರಮ ತಂದಿದೆ. ಈ ಪ್ರಶಸ್ತಿ ನೀಡಿದ ಅನ್ನಪೂರ್ಣ ಟ್ರಸ್ಟ್ನ ಸಮಿತಿಯವರಿಗೆ ಹಾಗೂ ಶಾಲೆಯ ಸಹ ಶಿಕ್ಷಕಿ ಕಲಾವತಿ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರಗಳಿಗೆ, ಗ್ರಾಮಸ್ಥರಿಗೆ, ಸಿ.ಆರ್.ಪಿ ದೀಪಾರವರಿಗೆ, ಗ್ರಾ.ಪಂ ಸದಸ್ಯರಿಗೆ, ಸಹಕರಿಸಿದ ಶಿಕ್ಷಣ ಇಲಾಖೆಯ ಸರ್ವರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?