ಸಿಗಂದೂರು ಸೇತುವೆ ನಿರ್ಮಾಣ ಕಾರ್ಯಕ್ಕೆ ಶ್ರಮಿಸಿದ ಸಂಸದರನ್ನು ಪ್ರಶಂಸಿಸಿದ ಹರತಾಳು ಹಾಲಪ್ಪ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವುದು ಸಮಯೋಚಿತ ನಿರ್ಧಾರದೊಂದಿಗೆ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಸಮ್ಮತಿ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಂದು ಸಿಗಂದೂರು ನೂತನ ಸೇತುವ ಉದ್ಘಾಟನೆಯ ಮುನ್ನ ಕಾಮಗಾರಿಯ ವೀಕ್ಷಣೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರರವರ ಜೊತೆಯಲ್ಲಿದ್ದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 6 ದಶಕಗಳ ಕನಸು ಈಡೇರಿದಂತಾಗಿದೆ ಸರ್ಕಾರ ಯಾವುದೇ ಇರಲಿ ಅಭಿವೃದ್ದಿಯಲ್ಲಿ ಎಲ್ಲರು ಕೈ ಜೋಡಿಸಿದಾಗ ಇನ್ನೂ ಹೆಚ್ಚಿನ ಅನುದಾನವನ್ನು ತರುವ ಕಾರ್ಯದಲ್ಲಿ ಸಂಸದರು ಮುಂಚೂಣಿಯಲ್ಲಿದ್ದಾರೆಂದು ಸಂಸದರನ್ನು ಅಭಿನಂದಿಸಿ ಶರಾವತಿ ಮುಳುಗಡೆಯಿಂದಾಗಿ ರೈತರ ಸಂಕಷ್ಟದ ಸ್ಥಿತಿಯಲ್ಲಿ ಬದುಕು ಕಟ್ಟಿಕೊಳ್ಳಲು 6 ದಶಕಗಳ ಕಾಲ ಬೇಕಾಯಿತು. ಅಲ್ಲದೆ ಬಿ.ಎಸ್.ಯಡಿಯೂರಪ್ಪನವರ ಸತತ ಪರಿಶ್ರಮದಿಂದಾಗಿ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇವರನ್ನು ಅಭಿನಂದಿಸಿ ಈ ಸುತುವೆ ಯಡಿಯೂರಪ್ಪ ಸೇತುವೆ ಎಂದು ಹೇಳಿದರು.

ಸಾಗರ-ಹೊಸನಗರ ಎರಡು ತಾಲ್ಲೂಕುಗಳು ಒಳಗೊಂಡಂತೆ ಸಂಪರ್ಕ ಇಲ್ಲದೆ ಈ ಭಾಗದ ರೈತಾಪಿ ವರ್ಗದವರಿಗೆ ದ್ವೀಪದಂತಾಗಿದ್ದ ಸಿಗಂದೂರು – ಕೊಲ್ಲೂರು ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಕೊಂಕಣ ಸುತ್ತಿ ಮೈಲಾರಕ್ಕೆ ಬರುವುದು ತಪ್ಪಿದಂತಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್, ಹಕ್ರೆ ಮಲ್ಲಿಕಾರ್ಜುನ, ಟಿ.ಡಿ.ಮಘೇರಾಜ್, ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ, ಶಾಂತಕುಮಾರ್ ಜಂಬಳ್ಳಿ, ರಾಜು ಹುಗುಡಿ, ಚಂದ್ರು ಕೋಟೆಗದ್ದೆ, ರಿಪ್ಪನ್‌ಪೇಟೆ ರಮೇಶ, ಸುನೀಲ್, ಆದರ್ಶ, ಇನ್ನಿತರರು ಹಾಜರಿದ್ದರು.

Leave a Comment