RIPPONPETE | ಮಲೆನಾಡಿನಲ್ಲಿ ಬಿರುಸುಕೊಂಡ ಪುಷ್ಯ ಮಳೆಯಿಂದಾಗಿ ಸಮೀಪದ ಹೆದ್ದಾರಿಪುರ ಹಾಗೂ ಕಲ್ಲೂರು ನಡುವೆ ಸಂಪರ್ಕಕ್ಕೆ ಇರುವ ಕುಮದ್ವತಿ ನದಿಯ ಕಿರುಸೇತುವೆ ಮೇಲೆ ಶುಕ್ರವಾರ ಬೆಳಗಿನಿಂದ ಸುರಿದ ಭಾರಿ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿದ್ದು, ಅಕ್ಕಪಕ್ಕದ ಹಳ್ಳಿ ಜನರು ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜಮಾಯಿಸಿದ್ದು ಕಂಡು ಬಂತು.

ಈ ಭಾಗದಲ್ಲಿ ಕುಮುದ್ವತಿ ನದಿ ಉಕ್ಕಿ ಹರಿದಿದ್ದರಿಂದಾಗಿ ಅಕ್ಕಪಕ್ಕದ ಕೃಷಿ ಜಮೀನುಗಳು ಜಲಾವೃತಗೊಂಡಿದ್ದು, ಅಲ್ಲಿ ಸಂತಾನೋತ್ಪತ್ತಿಗಾಗಿ ಬರುತ್ತಿದ್ದ ಮೀನುಗಳನ್ನು ಬಲೆ ಬಿಟ್ಟು ಹಿಡಿಯುವುದರಲ್ಲಿ ಸ್ಥಳೀಯರು ನಿರತರಾಗಿದ್ದರು.
ವಾರದಿಂದೀಚೆಗೆ ಬಿರುಸು ಪಡೆದು ಎಡಬಿಡದೆ ಸುರಿಯುತ್ತಿರುವ ಪುಷ್ಯ ಮಳೆಯು, ಈ ಭಾಗದಲ್ಲಿ ಕೃಷಿ ಚಟುವಟಿಕೆ ಸ್ವಲ್ಪ ಹಿನ್ನಡೆಯನ್ನುಂಟು ಮಾಡಿದೆ. ಆದರೂ ಅಲ್ಲಲ್ಲಿ ಸಸಿಮಡಿಗಳಿಂದ ಸಸಿ ಕೀಳುವುದು ಸೇರಿದಂತೆ ಇತರ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬರುತ್ತಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.