ಕೊಪ್ಪ ; ಮಲೆನಾಡಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಭಾರೀ ಗಾಳಿ ಮಳೆಗೆ ಆಟೋ ಮೇಲೆ ಮರ ಮುರಿದುಬಿದ್ದು, ಚಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭೈರೇದೇವರು ಗ್ರಾಮದಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು ರತ್ನಾಕರ್ ಎಂದು ಗುರುತಿಸಲಾಗಿದೆ. ಭಾರೀ ಗಾಳಿ ಮಳೆಗೆ ಮರ ಆಟೋ ಮೇಲೆ ಬಿದ್ದಿದೆ, ಪರಿಣಾಮ ಆಟೋ ಜಖಂ ಆಗಿದೆ. ಅದರಲ್ಲಿ ಸಿಲುಕಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿ ಮಹಾಮಳೆಗೆ ಮೂರನೇ ಬಲಿಯಾದಂತಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರೆದಿದ್ದು, ನಾಳೆಯೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.