ಮಹಾಮಳೆಗೆ ಕಾಫಿನಾಡಿನಲ್ಲಿ ಮೂರನೇ ಬಲಿ ; ಆಟೋ ಮೇಲೆ ಮರ ಬಿದ್ದು ಚಾಲಕ ಸಾವು !

Written by Mahesh Hindlemane

Published on:

ಕೊಪ್ಪ ; ಮಲೆನಾಡಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಭಾರೀ ಗಾಳಿ ಮಳೆಗೆ ಆಟೋ ಮೇಲೆ ಮರ ಮುರಿದುಬಿದ್ದು, ಚಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭೈರೇದೇವರು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತ ಆಟೋ ಚಾಲಕನನ್ನು ರತ್ನಾಕರ್ ಎಂದು ಗುರುತಿಸಲಾಗಿದೆ. ಭಾರೀ ಗಾಳಿ ಮಳೆಗೆ ಮರ ಆಟೋ ಮೇಲೆ ಬಿದ್ದಿದೆ, ಪರಿಣಾಮ ಆಟೋ ಜಖಂ ಆಗಿದೆ. ಅದರಲ್ಲಿ ಸಿಲುಕಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. 

ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿ ಮಹಾಮಳೆಗೆ ಮೂರನೇ ಬಲಿಯಾದಂತಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರೆದಿದ್ದು, ನಾಳೆಯೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment