SHIVAMOGGA/CHIKKAMAGALURU | ಮಲೆನಾಡು (Malenadu) ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಂಗಳವಾರ ತಡರಾತ್ರಿಯಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
Read More:LED Bulb | ಎಲ್ಇಡಿ ಹೆಡ್ಲೈಟ್ ಅಳವಡಿಸಿಕೊಂಡ ವಾಹನಗಳ ಮಾಲೀಕರೇ ದಂಡ ಕಟ್ಟಲು ಸಜ್ಜಾಗಿ !
ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದ ಬಳಿ ಕಳಸ-ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ ಮರ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳೀಯರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿದ್ದಾರೆ.
ಇನ್ನು ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಮಲೆಮನೆ, ರಾಣಿಜರಿ, ಸುಂಕಸಾಲೆ, ದೇವರಮನೆ ಸುತ್ತಮುತ್ತ ಬಿರುಸಿನ ಮಳೆಯಾಗಿದೆ.
ಕಳೆದೊಂದು ವಾರದಿಂದ ಬಿಡುವು ನೀಡಿದ್ದ ವರುಣದೇವ, ತಡರಾತ್ರಿಯಿಂದ ಮತ್ತೆ ಅಬ್ಬರಿಸುತ್ತಿದ್ದಾನೆ. ಭಾರಿ ಗಾಳಿ-ಮಳೆಗೆ ಚಾರ್ಮಾಡಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.
ಇತ್ತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ಬಿರುಸಿನ ಮಳೆಯಾಗುತ್ತಿದೆ. ಆಗುಂಬೆ ಘಾಟ್ ನಲ್ಲಿ ಮಂಜು ಮುಸುಕಿದ ವಾತಾವರಣ ಉಂಟಾಗಿದೆ.
ಇನ್ನೂ ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಮಳೆ ವಿವರ ಈ ಕೆಳಗಿನಂತಿದೆ.
ಶಿವಮೊಗ್ಗ ಜಿಲ್ಲೆ (ಮಿ.ಮೀ.ಗಳಲ್ಲಿ) :
- ಹೊಸೂರು-ಸಂಪೆಕಟ್ಟೆ (ಹೊಸನಗರ) : 78.5
- ಮೇಲಿನಬೆಸಿಗೆ (ಹೊಸನಗರ) : 76
- ಮುಂಬಾರು (ಹೊಸನಗರ) : 67
- ಬಿದರಗೋಡು (ತೀರ್ಥಹಳ್ಳಿ) : 63
- ನೊಣಬೂರು (ತೀರ್ಥಹಳ್ಳಿ) : 61
- ಕೋಡೂರು (ಹೊಸನಗರ) : 60.5
- ಅರೆಹಳ್ಳಿ (ತೀರ್ಥಹಳ್ಳಿ) : 54.5
- ಸೊನಲೆ (ಹೊಸನಗರ) : 50
- ಚಿಕ್ಕಜೇನಿ (ಹೊಸನಗರ) : 45.5
- ಖಂಡಿಕಾ (ಸಾಗರ) : 43.5
ಚಿಕ್ಕಮಗಳೂರು ಜಿಲ್ಲೆ (ಮಿ.ಮೀ. ಗಳಲ್ಲಿ) :
- ಬಣಕಲ್ (ಮೂಡಿಗೆರೆ) : 64.5
- ಬೇಗಾರು (ಶೃಂಗೇರಿ) : 57.5
- ಕಮ್ಮರಡಿ (ಕೊಪ್ಪ) : 50.5
- ಕೂತಗೋಡು (ಶೃಂಗೇರಿ) : 44
- ಹೊರನಾಡು (ಕಳಸ) : 41
- ವಿದ್ಯಾರಣ್ಯಪುರ (ಶೃಂಗೇರಿ) : 40.5
- ಹಿರೇಕೊಡಿಗೆ (ಕೊಪ್ಪ) : 39.5
- ಸೀತೂರು (ಎನ್.ಆರ್.ಪುರ) : 35
- ಹರಿಹರಪುರ (ಕೊಪ್ಪ) : 32
- ನಿಲುವಾಗಿಲು (ಕೊಪ್ಪ) : 31.5
Read More:LED Bulb | ಎಲ್ಇಡಿ ಹೆಡ್ಲೈಟ್ ಅಳವಡಿಸಿಕೊಂಡ ವಾಹನಗಳ ಮಾಲೀಕರೇ ದಂಡ ಕಟ್ಟಲು ಸಜ್ಜಾಗಿ !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ