Shivamogga

Agumbe ಸೆ.15ರ ವರೆಗೆ ಆಗುಂಬೆ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ! ಪರ್ಯಾಯ ಮಾರ್ಗ ಯಾವುದು ?

SHIVAMOGGA | ಮಳೆ ಹಿನ್ನೆಲೆ Agumbe ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ.

Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಪರ್ಯಾಯ ಮಾರ್ಗ ಯಾವುದು ?

ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ – ಮಾಸ್ತಿಕಟ್ಟೆ – ಸಿದ್ದಾಪುರ – ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More : Ganga kalyana ರೈತರಿಗೆ ಶುಭ ಸುದ್ದಿ ,ಗಂಗಾ ಕಲ್ಯಾಣ ಯೋಜನೆ 2024 ಅರ್ಜಿ ಅಹ್ವಾನ!

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>