7 ಮಂದಿ ಮೇಲೆ ಹೆಜ್ಜೇನು ದಾಳಿ, ಓರ್ವನ ಸ್ಥಿತಿ ಗಂಭೀರ !

Written by Mahesh Hindlemane

Published on:

HOSANAGARA ; ಎರಡೆರಡು ಬಾರಿ ಹೆಜ್ಜೇನು ದಾಳಿಗೆ ಒಳಗಾಗಿ ಒಟ್ಟು 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕೂಡಲೇ ನಗರ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೆ ಚಿಕಿತ್ಸೆ ನೀಡಲಾಯಿತು.

ಸಂಜೆ ಮತ್ತೊಮ್ಮೆ ದಾಳಿ !

ಸಂಜೆ 5 ಗಂಟೆ ವೇಳೆಗೆ ಅದೇ ಜಾಗದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಬೆಳಗ್ಗೆ ದಾಳಿಗೆ ಒಳಗಾಗಿದ್ದ ಬಾಷಾ ಪುತ್ರ ಆರೀಫ್ ಮೇಲೆ, ಪಕ್ಕದ ಮನೆ ಯಾಸಿನ್ ಮೇಲೆ ಮತ್ತೆ ಹೆಜ್ಜೇನು ದಾಳಿ ನಡೆಸಿದೆ. ಈ ವೇಳೆ ಹಾಸಿಗೆ ದುರಸ್ತಿಗಾಗಿ ಬಂದಿದ್ದ ಶಿವಮೊಗ್ಗದ ಮಂಜುನಾಥ ಬಡಾವಣೆ ನಿವಾಸಿ ಹುಸೇನ್ ಸಾಬ್ (68) ಮತ್ತು ಅವರ ಪುತ್ರ ಬಾಬಾ ಸಾಬ್ ಎಂಬುವವರ ಮೇಲೆ ಕೂಡ ಹೆಜ್ಜೇನು ದಾಳಿ ನಡೆಸಿದೆ.

ಹುಸೇನ್ ಸಾಬ್

ವೃದ್ಧ ಹುಸೇನ್ ಸಾಬ್ ಮೇಲೆ ತೀವ್ರ ದಾಳಿಯಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಭಾರೀ ಪ್ರಮಾಣದಲ್ಲಿ ಜೇನು ಕಚ್ಚಿದ್ದರಿಂದ ಸ್ಥಳೀಯರ ಸಹಕಾರದಿಂದ ಅವರ ದೇಹದಿಂದ 500ಕ್ಕೂ ಹೆಚ್ಚು ಮುಳ್ಳು ಹೊರತೆಗೆಯಲಾಗಿದೆ. ಬಳಿಕ ಹೊಸನಗರ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment