ಶಿವಮೊಗ್ಗ ಸುದ್ದಿ

Agumbe Ghat | ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ ಆಗುವ ಆತಂಕ

THIRTHAHALLI | Agumbe Ghat ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು ಪರಿಣಾಮ ಮಲೆನಾಡು ಮತ್ತು ಕರಾವಳಿಯನ್ನು ಬೆಸೆಯುವ ಪ್ರಮುಖ ಸಂಪರ್ಕ ಕೊಂಡಿಯಾದ ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸವಾರರು ಆತಂಕ ಪಡುವಂತಾಗಿದೆ‌.

WhatsApp Group Join Now
Telegram Group Join Now
Instagram Group Join Now

Malenadu Rain | ಕಳೆದ 24 ಗಂಟೆಗಳಲ್ಲಿ ಹೊಸನಗರದ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ ವರ್ಷಧಾರೆ, ಮಲೆನಾಡಿನ ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು, ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಸಂಚರಿಸುತ್ತಿವೆ.

Agumbe Ghat
Agumbe Ghat

ಈಗ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Agumbe Ghat

ಕಳೆದ 3 ವರ್ಷಗಳ ಹಿಂದೆ ಕೂಡ 6ನೇ ಸುತ್ತಿನಲ್ಲಿ ಘಾಟಿ ಕುಸಿದು ಸಂಚಾರ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಕುಸಿದವಾದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ. ರಸ್ತೆಯ ಮೇಲೆ ಕಲ್ಲುಗಳು ಬಿದ್ದಿದ್ದು ತೆರವು ಕಾರ್ಯಚರಣೆ ಆರಂಭವಾಗಿದೆ.

80 ಕೋಟಿ ರೂ. ವೆಚ್ಚದ ಸುಸಜ್ಜಿತ ವಸತಿ ಗೃಹ ಸಮುಚ್ಚಯ ಲೋಕಾರ್ಪಣೆ ; ಮಧು ಬಂಗಾರಪ್ಪ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]