ಹಿಂಡ್ಲೆಮನೆ ಷಣ್ಮುಖಪ್ಪ ಕೆ‌. ನಿಧನ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಚಿಂತಕರು, ಕುಶಲ ಕರ್ಮಿಗಳು, ಸಾಹಿತಿಗಳು, ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಷಣ್ಮುಖಪ್ಪ ಕೆ. (90) ಇಂದು (ಸೆ.19) ಮಧ್ಯಾಹ್ನ 12:50ಕ್ಕೆ ನಿಧನರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಸಂಜೆ 7:00 ಗಂಟೆಗೆ ಹಿಂಡ್ಲೆಮನೆಯ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಂತಾಪ ;

ಷಣ್ಮುಖಪ್ಪರ ನಿಧನಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿ.ಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಕೋಡೂರು ಗ್ರಾಪಂ ಸದಸ್ಯರಾದ ಶೇಖರಪ್ಪ, ಅನ್ನಪೂರ್ಣ ಮಹೇಶ, ಚಂದ್ರಕಲಾ ಸೇರಿದಂತೆ ಅನೇಕರು ತೀವ್ರ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Leave a Comment