ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನಾಳೆಯೂ (ಆಗಸ್ಟ್ 19) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಎಲ್ಲೆಲ್ಲಿ ರಜೆ ?
ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ಮತ್ತು ಲಕ್ಕವಳ್ಳಿ ಹೋಬಳಿ ವ್ಯಾಪ್ತಿಗೆ ಮಂಗಳವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

