Chikkamagaluru

ಭಾರಿ ಮಳೆ ; ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆ.18) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಜಿಲ್ಲಾಧಿಕಾರಿಗಳ ಆದೇಶ ;

📢 Stay Updated! Join our WhatsApp Channel Now →

ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು (ಆವತಿ, ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು ಹೋಬಳಿ ವ್ಯಾಪ್ತಿಗಳಿಗೆ ಮಾತ್ರ), ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಮತ್ತು ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಹಾಗೂ 34ರ ಅಧಿಕಾರದಡಿ ರಜೆ ಘೋಷಿಸಲಾಗಿದೆ.

ಮಳೆ ಅಬ್ಬರಕ್ಕೆ ಕಾರುಗಳು ಜಲಾವೃತ :

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಹಲೆವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಶೃಂಗೇರಿಯಲ್ಲಿ ಭಾರಿ ಮಳೆಯಿಂದ ಕಾರುಗಳು ಜಲಾವೃತಗೊಂಡಿದೆ. ಶೃಂಗೇರಿ ದೇಗುಲದ ಪಾರ್ಕಿಂಗ್ ಇರುವ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ. ತುಂಗಾ ನದಿ ಅಬ್ಬರಕ್ಕೆ ತಗ್ಗು ಪ್ರದೇಶದ ಹಲವು ಗ್ರಾಮಗಳ ಗದ್ದೆ ತೋಟಗಳಿಗೆ ನೀರು ನುಗ್ಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>