ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಕಲಿ ಆದೇಶ ಪ್ರತಿ !
ಇದಕ್ಕೂ ಮೊದಲು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಕಲಿ ಆದೇಶ ಪ್ರತಿ ಹೊರ ಬಿದ್ದು ಗೊಂದಲ ಮೂಡಿತ್ತು. ಆ ನಂತರ ಮಕ್ಕಳು, ಪೋಷಕರಲ್ಲಿ ರಜೆ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಹೀಗಾಗಿ ಚಿಕ್ಕಮಗಳೂರು ಡಿಸಿ ಮೀನಾ ನಾಗರಾಜ್, ನಾಳೆ ಅಂಗನವಾಡಿಗಳಿಗೆ ಮಾತ್ರವೇ ರಜೆ ನೀಡಿರುವುದಾಗಿ ಅಧಿಕೃತ ಆದೇಶ ಹೊರಡಿಸಿ ತಿಳಿಸಿದ್ದಾರೆ.