ಚಿಕ್ಕಮಗಳೂರು ತಾಲೂಕು ಸುದ್ದಿ ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿಗಳಿಗೆ ನಾಳೆಯೂ ರಜೆ !

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

inshot_20250704_2258105205028665799558430283.jpg

ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಕಲಿ ಆದೇಶ ಪ್ರತಿ !
ಇದಕ್ಕೂ ಮೊದಲು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಕಲಿ ಆದೇಶ ಪ್ರತಿ ಹೊರ ಬಿದ್ದು ಗೊಂದಲ ಮೂಡಿತ್ತು. ಆ ನಂತರ ಮಕ್ಕಳು, ಪೋಷಕರಲ್ಲಿ ರಜೆ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಹೀಗಾಗಿ ಚಿಕ್ಕಮಗಳೂರು ಡಿಸಿ ಮೀನಾ ನಾಗರಾಜ್, ನಾಳೆ ಅಂಗನವಾಡಿಗಳಿಗೆ ಮಾತ್ರವೇ ರಜೆ ನೀಡಿರುವುದಾಗಿ ಅಧಿಕೃತ ಆದೇಶ ಹೊರಡಿಸಿ  ತಿಳಿಸಿದ್ದಾರೆ.

Leave a Comment