ಹೊಸನಗರ : ತಾಲ್ಲೂಕಿನಾದ್ಯಂತ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಇಂದು (ಜು.06) ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಪಿ.ಯು. ಕಾಲೇಜುಗಳಿಗೆ ರಜೆ ಘೋಷಿಸಿ ಹೊಸನಗರ ತಹಸೀಲ್ದಾರ್ ಭರತ್ರಾಜ್ ಆದೇಶಿಸಿದ್ದಾರೆ.

ಈ ರಜೆ ದಿನದಂದು ನಡೆಯಬೇಕಾಗಿದ್ದ, ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಿಳಿಸಲಾಗಿದೆ.

