ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್ಗಳಿಂದ ಅಧಿಕೃತ ಆದೇಶ ಹೊರಬಂದಿದ್ದು, ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ, ಡಿಪ್ಲೊಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಪ್ರಸ್ತುತ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ, ಮಕ್ಕಳ ಸುರಕ್ಷತೆ ರಜೆ ಘೋಷಣೆ ಮಾಡಲಾಗಿದೆ.