RIPPONPETE ; ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು.
ರಿಪ್ಪನ್ಪೇಟೆ ಸಮೀಪದ ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಮಠದ ಶ್ರೀ ನೇಮಿನಾಥ ಸ್ವಾಮಿ, ಮಕ್ಕಳ ಜಿನಾಲಯ, ತ್ರಿಕೂಟ ಜಿನಾಲಯ, ನಗರ ಜಿನಾಯಲದಲ್ಲಿ ನವರಾತ್ರಿಯ ಆರನೇ ದಿನದ ರಾತ್ರಿ ಅಷ್ಟಾವಧಾನ ಶ್ರೀ ಕ್ಷೇತ್ರಪಾಲ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಅಲಂಕಾರದೊAದಿಗೆ ಪೂಜೆಯನ್ನು ನೆರವೇರಿಸಿ ಅಶೀರ್ವಚನ ನೀಡಿ ಜೀವನ ಸೋಪಾನವಾಗಲೆಂದು ಹರಸಿದರು.
ಆರ್ಯಿಕಾರತ್ನ ಶ್ರೀ 105 ಶಿವಮತಿ ಮಾತಾಜಿಯವರು ಸ್ತ್ರೋತ್ರಗಳನ್ನು ಪಠಿಸಿ ಪೂಜಾ ವಿಧಿಗಳಲ್ಲಿ ಉಪಸ್ಥಿತರಿದ್ದರು. ಪಂಚಕೂಟ ಬಸದಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಆಶ್ವಯುಜ ಶುಕ್ಲ ಷಷ್ಠಿಯಂದು ಶರನ್ನವರಾತ್ರಿ ಉತ್ಸವಕ್ಕೆ ಪ್ರಾತಃಕಾಲ ಕುಮದ್ವತಿ ತೀರ್ಥದಿಂದ ಅಗ್ರೋದಕವನ್ನು ಮಂತ್ರಘೋಷ, ಜಿನಭಜನೆಯೊಂದಿಗೆ ಶ್ರೀಕ್ಷೇತ್ರದ ಸನ್ನಿಧಿಗೆ ತರಲಾಯಿತು. ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ವಿಧಿಗಳು ಸಾಂಗವಾಗಿ ಜರುಗಿದವು.
ನವರಾತ್ರಿಯ ಆರನೇ ದಿನದ ರಾತ್ರಿ ಅಷ್ಟಾವಧಾನ, ಉತ್ಸವ, ವಿಶೇಷ ಪೂಜೆಗಳಲ್ಲಿ ಭಕ್ತವೃಂದದವರು, ಶ್ರೀ ಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು, ಊರ-ಪರವೂರ ಭಕ್ತರು ಪಾಲ್ಗೊಂಡು ಧನ್ಯರಾದರು.
ಯಥೋಚಿತ ಅನ್ನಪ್ರಸಾದ ಸ್ವೀಕರಿಸಿದ ಭಕ್ತರು ಶ್ರೀ ಕ್ಷೇತ್ರದ ಜಿನಾಲಯಗಳ ದರ್ಶನ ಪಡೆದರು. ವಾದ್ಯಗೋಷ್ಠಿ, ಜಿನಭಜನೆ ಶ್ರೀಕ್ಷೇತ್ರದಲ್ಲಿ ಧರ್ಮಜಾಗೃತಿ ಪರಿಸಿತು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ