ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ

Written by Mahesha Hindlemane

Published on:

ಹೊಂಬುಜ ; ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ತಾಯಿ ಚೆನ್ನಮ್ಮರವರು ತಮ್ಮ 89ನೇ ವಯಸ್ಸಿನಲ್ಲಿ ಸ್ವರ್ಗಸ್ಥರಾದ ವಿಷಯ ತಿಳಿದು ಅತೀವ ದುಃಖವಾಯಿತು ಎಂದು ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇವರು ತಮ್ಮ ಸರಳತೆ, ಸಂಸ್ಕಾರ ಮತ್ತು ಕುಟುಂಬ ಮೌಲ್ಯಗಳ ಸಾಕಾರ ಮೂರ್ತಿಯಾಗಿದ್ದರು. ಇವರು ಧರ್ಮ ಕಾರ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು ಆದರ್ಶ ಗೃಹಿಣಿಯಾಗಿ ಧರ್ಮ ಪಾಲನೆ, ಆಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಇವರ ಧರ್ಮನಿಷ್ಠೆ, ಸೇವಾಕಾರ್ಯ ಸಮಾಜ ಬಾಂಧವರೊಡನೆ ಆತ್ಮೀಯ ಸಂಬಂಧಗಳ ಸ್ಮರಣೆ ಸದಾ ಇರುವುದು. ನಡೆದಾಡುವ ಸರಸ್ವತಿಯಾಗಿದ್ದ ಇವರು ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ವೃದ್ಧಿಸುವಂತೆ ಸದಾಕಾಲ ಪ್ರಯತ್ನಿಸುತ್ತಿದ್ದರು. ಮಾತೃ ಸಮಾನರಾದ ಇವರ ಅಗಲಿಕೆಯಿಂದ ದೇವೇಗೌಡರ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ತೀವ್ರ ಆಘಾತವುಂಟಾಗಿದೆ.

ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಅಭೀಷ್ಟವರ ಪ್ರದಾಯಿನಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಅಗಲಿದ ಚೆನ್ನಮ್ಮರವರ ಆತ್ಮಕ್ಕೆ ಶಾಂತಿ ನೀಡಲೆಂದು, ದೇವೇಗೌಡರಿಗೂ ಅವರ ಸಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ ಎಂದು ತಮ್ಮ ಶೋಕ ಸಂದೇಶದಲ್ಲಿ ಶ್ರೀಗಳು ತಿಳಿಸಿದ್ದಾರೆ.

Leave a Comment