ಪ್ರಾಕೃತ ಭಾಷೆಗೆ ಶಾಸ್ತ್ರಿಯ ಸ್ಥಾನಮಾನ, ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಹೊಂಬುಜ ಶ್ರೀಗಳ ಅಭಿನಂದನೆ

Written by Mahesha Hindlemane

Published on:

RIPPONPETE ; ಭಾರತದ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಗುರುವಾರ ನಡೆದ ಸಭೆಯಲ್ಲಿ ಪ್ರಾಕೃತ ಭಾಷೆಗೆ ಶಾಸ್ತ್ರಿಯ ಸ್ಥಾನಮಾನ ನೀಡಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠ ಪರಮಪೂಜ್ಯ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಮೀಪದ ಹೊಂಬುಜ ಮಠದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, 2004 ಅಕ್ಟೋಬರ್ 12ರಂದು ಶಾಸ್ತ್ರೀಯ ಭಾಷೆ ಸ್ಥಾನವನ್ನು ನೀಡಲು ಸರ್ಕಾರವು ನಿರ್ಧರಿಸಿತ್ತು. ಪ್ರಸ್ತುತ ಪ್ರಾಕೃತ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿ, ಪ್ರಾಕೃತ ಭಾಷೆಯನ್ನು ಬೆಳೆಸುವ ಮುಂದಿನ ಜನಾಂಗಕ್ಕೆ ಭಾಷೆಯ ಪರಿಚಯದ ಪ್ರಧಾನಿಯವರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.

Leave a Comment