ಹೊಸನಗರ ವಿಧಾನಸಭಾ ಕ್ಷೇತ್ರಕ್ಕಾಗಿ ಹೊಂಬುಜ ಶ್ರೀಗಳ ಆಗ್ರಹ

Written by Mahesha Hindlemane

Published on:

ಹೊಂಬುಜ ; ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆಗಾಗಿ ಬೃಹತ್ ಹೋರಾಟ ನಡೆಯುತ್ತಿದ್ದು, ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೋಸ್ಕರ ಪುನರ್‌ಸ್ಥಾಪನೆ ತುಂಬಾ ಅವಶ್ಯವಾಗಿದೆ ಎಂದು ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಅರಣ್ಯ ಭೂಮಿಯು ಹೆಚ್ಚು ವ್ಯಾಪಿಸಿದ್ದು, ವಿಸ್ತೀರ್ಣದಲ್ಲಿ ದೊಡ್ಡದಿದೆ. ಇಲ್ಲಿಯ ಗ್ರಾಮೀಣ ಪ್ರದೇಶಗಳಿಗೆ ಎಲ್ಲಾ ಸೌಕರ್ಯಗಳು ಸರಿಯಾಗಿ ತಲುಪದೇ ಆರ್ಥಿಕವಾಗಿ ಹಿನ್ನಡೆಯಾಗಿದೆ. ಶೈಕ್ಷಣಿಕ, ಸಾಮಾಜಿಕ, ಭೌಗೋಳಿಕ ಹೀಗೆ ನಾನಾ ಕಾರಣಗಳಿಗಾಗಿ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆ ಅಗತ್ಯವಾಗಿದೆ.

ಈ ಸಮಗ್ರ ಹೋರಾಟಕ್ಕೆ ಸಮರ್ಥನೆ ಕೊಟ್ಟು ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆ ಮಾಡಬೇಕೆಂದು ಸ್ವಾಮೀಜಿಯವರು ಆಗ್ರಹಿಸಿದ್ದಾರೆ.

Leave a Comment