ಪ್ರತಿಭಾವಂತ ಮಕ್ಕಳ ಸನ್ಮಾನ ಅಭಿವೃದ್ಧಿಯ ಸಂಕೇತ : ಕೆ.ವಿ. ಕೃಷ್ಣಮೂರ್ತಿ

Written by Mahesha Hindlemane

Published on:

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳಾಗಿರಲಿ ಅಥವಾ ಸರ್ಕಾರಗಳೇ ಆಗಿರಲಿ ಪ್ರತಿಭಾವಂತ ಮಕ್ಕಳನ್ನು ಗುರುತಿಸುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗುವುದರ ಜೊತೆಗೆ ಸಮಾಜದ ವಿಕಾಸ ಹಾಗೂ ಅಭಿವೃದ್ಧಿಯ ಸಂಕೇತ ಎಂದು ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘದ (ಮಾಮ್‌ಕೋಸ್‌) ನಿರ್ದೇಶಕ ಕೆ.ವಿ. ಕೃಷಮೂರ್ತಿ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ಹೊಸನಗರ ಶಾಖೆಯ ಆವರಣದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಪ್ರಶಸ್ತಿ ಪತ್ರ, ನಗದು ಪುರಸ್ಕಾರ ಹಾಗೂ ಅಭಿನಂದನಾ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ನಮ್ಮ ಸಂಸ್ಥೆಯು ಸದಸ್ಯರ ಮಕ್ಕಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ‌. ವಿದ್ಯಾರ್ಥಿಗಳ ಭವಿಷ್ಯವೇ ನಮ್ಮ ಸಂಸ್ಥೆಯ ಗುರಿಯಾಗಿರುತ್ತದೆ. ಸಂಘದ ಸದಸ್ಯರಿಗೆ ವಿವಿಧ ಸೌಲಭ್ಯಗಳಾದ ಅಡಿಕೆ ಆಧಾರಿತ ಸಾಲ, ಕಟಾವು ಸಾಲ, ಕೊಳೆರೋಗದ ಸಾಲ, ನಿಗದಿತ ಹಾಗೂ ಠೇವಣಿ ಯೋಜನೆಗಳು ಗುಂಪು ವಿಮಾ ಯೋಜನೆ ವೈದ್ಯಕೀಯ ಸೌಲಭ್ಯ ಹಾಗೂ ಮರಣೋತ್ತರ ನಿಧಿ ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಸಂಘದ ಸದಸ್ಯರ ಮಕ್ಕಳಿಗಾಗಿ ವಿಶೇಷ ಯೋಜನೆ ಜಾರಿಗೆ ತರಬೇಕೆಂದು ನಮ್ಮ ಸಂಸ್ಥೆ ಚಿಂತಿಸುತ್ತಿದೆ ಅಡಿಕೆ ಬೆಳೆಗಾರರು ನಮ್ಮ ಸಂಸ್ಥೆಯೊಂದಿಗೆ ವ್ಯವಹಾರಿಸಬೇಕೆಂದು ಈ ಮೂಲಕ ಕೇಳಿಕೊಂಡರು.

ಪ್ರತಿಭಾ ಪುರಸ್ಕಾರ ನಡೆಯುವ ಸಂದರ್ಭದಲ್ಲಿ ನಿರ್ದೇಶಕ ಧರ್ಮೇಂದ್ರ, ಶಾಖಾ ವ್ಯವಸ್ಥಾಪಕ ಗಣಪತಿ ಎಸ್.ಕೆ, ಕಿರಿಯ ಸಹಾಯಕ ಮಧುಸೂದನ್, ವಿದ್ಯಾಶ್ರೀ, ದಿವ್ಯಾ, ಲೀಲಾವತಿ, ದಯಾನಂದ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment