ಹೊಸನಗರ ; ಕಾಮಗಾರಿ ವೇಳೆ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕು ಹುಲಿಕಲ್ ಘಾಟಿಯಲ್ಲಿ ನಡೆದಿದ್ದು ಹಲವು ಕಾರ್ಮಿಕರು ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿದೆ.
ಘಾಟಿಯ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ಘಟನೆಯಾಗಿದೆ. ಹೇರ್ಪಿನ್ ತಿರುವಿನಲ್ಲಿ ಮಣ್ಣು ಕುಸಿಯುತ್ತಿತ್ತು. ಈ ಹಿನ್ನೆಲೆ ರಸ್ತೆ ರಿಪೇರಿ ಕಾಮಗಾರಿ ನಡೆಸಲಾಗುತಿತ್ತು. ಇಂದು ಸಂಜೆ 6 ಗಂಟೆ ಸುಮಾರಿಗೆ ಕಾರ್ಮಿಕರ ಮೇಲೆ ಮಣ್ಣು ಜಾರಿದೆ. ಮಣ್ಣಿನ ಅಡಿ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಮೃತರನ್ನು ಚಕ್ಕಾರು ನಗರ ವಾಸಿ ರಾಘವೇಂದ್ರ ಬಿನ್ ಕೃಷ್ಣಮೂರ್ತಿ (37), ಹಾವೇರಿ ತಾಲೂಕಿನ ನೀಲವಗಲ್ಲು ರಾಜು (30) ಮತ್ತು ನೀಲವಗಲ್ಲು ನಿವಾಸಿ ಶಬ್ಬೀರ್ (40) ಎಂದು ತಿಳಿದುಬಂದಿದೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1SXi4tXjAS/
ಇನ್ನೂ ಮಣ್ಣಿನ ಅಡಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಹೊಸನಗರ ಸಿಪಿಐ ಗೌಡಪ್ಪಗೌಡ ಹಾಗೂ ಶಾಸಕ ಆರಗ ಜ್ಞಾನೇಂದ್ರ ಸ್ಥಳದಲ್ಲಿ ಹಾಜರಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ 52ರ ಮಾಸ್ತಿಕಟ್ಟೆ – ಕುಂದಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಸಂಪೂರ್ಣ ಕಡಿತಗೊಂಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





