Hosanagara

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Instagram Group Join Now
ನಾಗೋಡಿ ವಿಶ್ವನಾಥ್
📢 Stay Updated! Join our WhatsApp Channel Now →

ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್ ಹಾಗು ಖಜಾಂಚಿಯಾಗಿ ದುಮ್ಮ ವಿನಯ್ ಕುಮಾರ್ ನೇಮಕಗೊಂಡಿದ್ದಾರೆ.

ಕಾರ್ಯದರ್ಶಿ ಸ್ಥಾನಕ್ಕೆ ಹೂವಿನಕೋಣೆ ಉಮೇಶ್, ಜಯನಗರ ಶುಭಾಕರ ಪೂಜಾರಿ, ಕೋಡೂರು ಎಸ್.ಪಿ. ಸುರೇಶ್, ನಾಗೋಡಿ ಚಂದ್ರಯ್ಯ ಜೈನ್, ಗುಬ್ಬಿಗ ಬೆಳ್ಳೂರು ಶಿವಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ಮಾರುತಿಪುರ ಇಂದ್ರೇಶ್, ಅರಸಾಳು ಪಿಯೂಸ್ ರೋಡ್ರಿಗಸ್, ಮುತ್ತಲ ರಾಮಪ್ಪ, ಹರಿದ್ರಾವತಿ ಸಂತೋಷ್, ನವಲೋಡಿ ಚಂದ್ರಶೇಖರ, ಹಿರೇಮೈತಿ ವೆಂಕಟಾಚಲ ನೇಮಕಗೊಂಡಿದ್ದಾರೆ.

ಇನ್ನೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಾಳೂರು ಉಮೇಶ್, ಮಾಕನಕಟ್ಟೆ ಗಣಪತಿ, ಕಾರಕ್ಕಿ ಸುಬ್ಬಣ್ಣ, ಜೇನಿ ಮಾಧವ ಶೆಟ್ಟಿ, ಹುಂಚ ರೋಡ್ ಪ್ರಶಾಂತ್ ಕುಮಾರ್ ಕಚ್ಚಿಗೆಬೈಲ್ ನಾಸೀರ್, ರಿಪ್ಪನ್‌ಪೇಟೆಯ ನೇಮಪ್ಪ ಬಂಡಿ, ಧನಲಕ್ಷ್ಮಿ, ಕಳೂರು ಕೃಷ್ಣಮೂರ್ತಿ ಶೆಟ್ಟಿ, ಅರಸಾಳು ನಾಗರಾಜ್, ಬಟ್ಟೆಮಲ್ಲಪ್ಪ ಇಕ್ಬಾಲ್, ಪುರಪ್ಪೆಮನೆ ಮೃತ್ಯುಂಜಯ, ಮಾರುತಿಪುರ ದೀಪಿಕಾ ಕೃಷ್ಣ, ಪ್ರಕಾಶ್ ಪಾಲೇಕರ್, ಕೆಂಚನಾಲ ಕೃಷ್ಣೋಜಿ, ಹರತಾಳು ಕುಮಾರ್ ಮಂಡಿ, ಪುರಪ್ಪೆಮನೆ ಸುಜಾತ ದಿನೇಶ್, ಜಯನಗರ ಗುರು ಅವರನ್ನು ನೇಮಕ ಮಾಡಿ ಆದೇಶ ನೀಡಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>