ಹೊಸನಗರ : ತಾಲ್ಲೂಕಿನಲ್ಲಿ ಸುಮಾರು 207 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ. ಅವರೆಲ್ಲರೂ ಪುನಃ ಶಾಲೆಗೆ ಕರೆ ತರುವ ಕಾರ್ಯಕ್ರಮ ನಡೆಯುತ್ತಿದ್ದು ಅದರಂತೆ ತಹಸೀಲ್ದಾರ್ ಭರತ್ರಾಜ್ ನೇತೃತ್ವದ ತಂಡ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯಿತ್ರಿ ಕೆ.ಜಿ ಹಾಗೂ ಹೊಸನಗರದ ಎಲ್ಲ ಸರ್ಕಾರಿ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಪುನಃ ಕರೆ ತರುವ ಪ್ರಯತ್ನ ನಡೆಯುತ್ತಿದ್ದು ಅದರಂತೆ ಹೊಸನಗರ ತಾಲ್ಲೂಕು ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಮ್ಮ ಗ್ರಾಮದ ವಿದ್ಯಾರ್ಥಿನಿಯನ್ನು ಹೊಸನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಮಾರುತಿ ಶಿಂಧೆ ಖುದ್ದು ಆಕೆಯ ಮನೆಗೆ ಭೇಟಿ ನೀಡಿ ಆಕೆಯನ್ನು ಹಾಗೂ ಅವರ ಕುಟುಂಬದವರನ್ನು ಮನವೊಲಿಸಿ ಶಾಲೆಗೆ ಪುನಃ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯಿತ್ರಿ ಕೆ.ಜಿ, ಸರ್ಕಾರಿ ಅಭಿಯೋಜಕ ಅರುಣ್ಕುಮಾರ್, ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ, ಪ್ರೌಢಶಾಲಾ ಮುಖೋಪಾಧ್ಯಯ ಪರಶುರಾಮ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರ ಬಿ.ಬಿ, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

