ಭಾರಿ ಮಳೆಗೆ ಮನೆ ಬಿದ್ದ ತೆಂಗಿನಮರ, ಲಕ್ಷಾಂತರ ರೂ. ನಷ್ಟ !

Written by Mahesh Hindlemane

Published on:

HOSANAGARA | ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ.

WhatsApp Group Join Now
Telegram Group Join Now
Instagram Group Join Now

ಮಾಸ್ತಿಕಟ್ಟೆಯಲ್ಲಿ ದಾಖಲಾಯ್ತು ಅತೀ ಹೆಚ್ಚು ಮಳೆ, ಮತ್ತೆಲ್ಲೆಲ್ಲಿ ಎಷ್ಟಾಗಿದೆ ?

ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ‌.

ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ ನಾಗರಾಜ್, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Rains | ಕಳೆದ 12 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Leave a Comment