ಹೊಸನಗರ ; ಪಟ್ಟಣದಲ್ಲಿ ಸುಮಾರು 60 ವರ್ಷಗಳ ಕಾಲ ಬಸ್ ನಿಲ್ದಾಣದಲ್ಲಿ ಅಂಗಡಿ ನಡೆಸಿ ಬಸ್ ಸ್ಟ್ಯಾಂಡ್ ಅಂಗಡಿ ಗಣಪತಿಯೆಂದು ಚಿರಪರಿಚಿತರಾದ ಗಣಪತಿ ಶೇಟ್ (79) ಗುರುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು.
ಮೃತರು ಪತ್ನಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.
ಸಂತಾಪ ;
ಗಣಪತಿ ಶೇಟ್ ನಿಧನಕ್ಕೆ ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಪಟ್ಟಣ ಪಂಚಾಯತಿ ಸದಸ್ಯ ಅಶ್ವಿನಿಕುಮಾರ್, ಹೆಚ್. ವಸಂತ, ಚಂದ್ರಶೇಖರ್ ಶೇಟ್, ರವಿ ಶೇಟ್, ಮಿಲ್ ಈಶ್ವರಪ್ಪ ಗೌಡ, ಜಿ.ಟಿ ಈಶ್ವರಪ್ಪ ಗೌಡ, ಹತ್ವಾಲ್ ಮುರುಳಿಧರ, ಹೆಚ್ ಶ್ರೀನಿವಾಸ್, ಗೌತಮ್ ಕುಮಾರಸ್ವಾಮಿ, ಕುಂದಾಪುರದ ಉದಯಕುಮಾರ್ ಹಾಗೂ ಕೊಡಚಾದ್ರಿ ಅಡಿಕೆ ಮಂಡಿಯ ಎಲ್ಲಾ ಸಿಬ್ಬಂದಿಗಳು ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.