HOSANAGARA | ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
SHIVAMOGGA ಕೃಷಿ-ಶಿಕ್ಷಣ ವಲಯ ಮತ್ತು ಸಾಮಾಜಿಕ ಭದ್ರತಾ ಯೋಜನೆಯಡಿ ಸಾಧನೆ ತೋರಲು ಸಂಸದ ಬಿವೈಆರ್ ಸೂಚನೆ
ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ.

ಸೇತುವೆ ಬದಿಯ ಇಕ್ಕೆಲಕ್ಕೆ ಮಣ್ಣನ್ನ ತುಂಬಿದ್ದು ಅದು ಇನ್ನೂ ಸೆಟ್ಟಿಂಗ್ ಆಗುವ ಮೊದಲೇ ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಸಮತಟ್ಟು ಮಾಜಲಾಗಿದೆ. ಅಲ್ಲದೇ ಡ್ರೈ ಮಣ್ಣಿಗೆ ಪಿಚ್ಚಿಂಗ್ ಕಟ್ಟಿರುತ್ತಾರೆ. ಈಗ ನೀರು ಇಳಿದ ಹಾಗೆಲ್ಲಾ, ಮಣ್ಣು ಸೆಟ್ಟಿಂಗ್ ಆಗದ ಕಾರಣ ಕುಸಿದಿದೆ. ಇದಕ್ಕೂ ಹೆಚ್ಚು ಮಳೆಗೂ ಏನು ಸಂಬಂಧವಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಒಟ್ಟಾರೆ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸೇತುವೆಯ ಪಿಚ್ಚಿಂಗ್ ಕುಸಿದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ.
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ದಾಖಲಾದ ಟಾಪ್ 10 ಸ್ಥಳಗಳಿವು

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.