HOSANAGARA ; ನಾವು ಯಾವ ಕೆಲಸ ಮಾಡುತ್ತಿದ್ದೇವೆ ಎಂಬುವುದು ಮುಖ್ಯವಲ್ಲ ದೇವರಿಗೆ ಜನರಿಗೆ ಮೋಸ ಮಾಡದೇ ಮಾಡುವ ಕೆಲಸದಲ್ಲಿ ತೃಪ್ತಿ ಪಡಬೇಕು ಎಂದು ಸಾಮಾಜಿಕ ಹೋರಾಟಗಾರ ರಿಪ್ಪನ್ಪೇಟೆ ಟಿ.ಆರ್. ಕೃಷ್ಣಪ್ಪ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿರುವ ಚೌಡಮ್ಮ ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶನಿವಾರ ಬೆಳಗ್ಗೆ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಧ್ವಜಾರೋಹಣ ನೇರವೇರಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಾವು ಮಾಡುವ ಕೆಲಸ ಜೀವನ ಸಾಗಿಸುವ ಉದ್ದೇಶದಿಂದ ಮಾಡಬೇಕಾಗಿದೆ ಕೆಲಸ ಮಾಡುವುದರಲ್ಲಿ ಮೇಲು ಕೀಳು ಎಂಬುದಿರುವುದಿಲ್ಲ. ನಾವು ಮಾಡುವ ಕೆಲಸದಲ್ಲಿ ಯಾವುದೇ ಮೋಸವಿಲ್ಲದಂತೆ ಕೆಲಸ ಮಾಡಬೇಕು ಎಂದರು.

ಆಟೋ ಚಾಲನೆ ಉತ್ತಮ ಕೆಲಸ :
ಆಟೋಚಾಲನೆ ಮಾಡುವುದು ಸಾರ್ವಜನಿಕರ ಅನುಕೂಲಕ್ಕಾಗಿ ಇರುವಂಥದ್ದು ಆಟೋಗಳಿಂದ ಸಾರ್ವಜನಿಕರಿಗೆ ಇಲ್ಲಿಯವರೆಗೆ ಅನುಕೂಲವಾಗಿದೇಯೇ ಹೊರತು ಯಾರಿಗೂ ತೊಂದರೆಯಾಗಿಲ್ಲ. ಈ ಕೆಲಸ ಸಮಾಜದಲ್ಲಿ ಸಾರ್ವಜನಿಕರಿಗೆ ಉತ್ತಮವಾಗಿ ಸೇವೆ ಮಾಡುತ್ತಿದ್ದು ಯಾವುದೇ ಕಪ್ಪು ಚುಕ್ಕಿ ಇಲ್ಲದಂತೆ ಮುಂದುವರೆಸಿಕೊಂಡು ಹೋಗಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು.
ಕನ್ನಡದ ಚಲನಚಿತ್ರ ನಿರ್ದೇಶಕ ನಟ ದಿ||ಶಂಕರ್ನಾಗ್ರವರ ಭಾವಚಿತ್ರಕ್ಕೆ ಚೌಡಮ್ಮ ಆಟೋರಿಕ್ಷಾ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಣ್ಣಪ್ಪನವರು ಪೂಜೆ ಸಲ್ಲಿಸಿ ನಂತರ ಕನ್ನಡ ಧ್ವಜಾರೋಹಣ ನೇರವೇರಿಸಲಾಯಿತು.
ಸುಮಾರು 25 ಕ್ಕಿಂತಲ್ಲೂ ಹೆಚ್ಚು ಆಟೋ ರಿಕ್ಷಾಗಳಿಗೆ ಮಾಲೀಕರು ಚಾಲಕರು ಶೃಂಗಾರಗೊಳಿಸಿ ಹೊಸನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಿಹಿ ಹಂಚಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?