ಹೊಸನಗರ ; 39 ಕೆ.ಜಿ. ಶ್ರೀಗಂಧ ಸಹಿತ ಓರ್ವನ ಬಂಧನ !

Written by Mahesh Hindlemane

Published on:

ಹೊಸನಗರ ; ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಕಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಂಚಾರಿ ದಳದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ತಲೆಮರೆಸಿಕೊಂಡ ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅರಣ್ಯ ಸಂಚಾರಿ ದಳದ ಪೊಲೀಸರು ನಿಖರ ಮಾಹಿತಿಯನ್ನಾದರಿಸಿ ಈ ಕಾರ್ಯಾಚರಣೆ ನಡೆಸಿದ್ದು 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ.

ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ನೆಲ್ಲಿಸರದ ವಾಸಿ ದಯಾಕುಮಾರ್‌ @ ದಯಾನಂದ ಬಂಧಿತ ಆರೋಪಿ. ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಕೌಶಿಕ್‌ ನಾಪತ್ತೆಯಾಗಿದ್ದು ಈತನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ ಮತ್ತು ಸಿಬ್ಬಂದಿ ಹಾಗೂ ಹೊಸನಗರ ವಲಯದ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಗಸ್ತು ಅರಣ್ಯ ಪಾಲಕ ಭರತ್ ಕುಮಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Comment