Hosanagara

ಹೊಸನಗರ ; ಬಸ್ ನಿಲ್ದಾಣದ ಬಳಿ 50 ಸಾವಿರ ಹಣವಿರುವ ಬ್ಯಾಗ್ ಎಗರಿಸಿದ ಕಳ್ಳರು ! ಇಲ್ಲಿ ನಿಜಕ್ಕೂ ನಡೆದದ್ದೇನು ಗೊತ್ತಾ ?

ಹೊಸನಗರ ; ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಹಾಗೂ ಪಿಎಸ್ಐ ಶಂಕರಗೌಡ ಪಾಟೀಲ್‌ರವರ ನೇತೃತ್ವದಲ್ಲಿ ಜನ ಜಾಗೃತಿಗಾಗಿ ಅಣಕು ಪ್ರದರ್ಶನವನ್ನು ಹೊಸನಗರದ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪಾತ್ರಧಾರಿಗಳಾಗಿ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದ್ದು ನಿಜವಾಗಿಯೂ ಬಸ್‌ ನಿಲ್ದಾಣದ ಆವರಣದಲ್ಲಿ 50 ಸಾವಿರ ಹಣ ಇರುವ ಬ್ಯಾಗ್ ಕಳ್ಳತನವಾಗಿದೆ ಎಂಬ ರೀತಿಯಲ್ಲಿ ಹೊಸನಗರದಲ್ಲೆಲ್ಲಾ ಸುದ್ದಿ ಹಬ್ಬಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/161RPf9KtK/

ಜನಜಾಗೃತಿಯ ಸಾರಾಂಶ :

ರಾಜ್ಯಾದ್ಯಂತ ಬೈಕ್‌ನಲ್ಲಿ ಬಂದು ಸರ ಕಳ್ಳತನ, ಬ್ಯಾಗ್ ಕಳ್ಳತನ ಈ ರೀತಿ ಕಳ್ಳತನವಾಗುತ್ತಿದ್ದು ಹೊಸನಗರದಲ್ಲಿಯೂ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ಸಿಬ್ಬಂದಿಯಾದ ಕೌಸಲ್ಯರವರು ಬ್ಯಾಗ್ ಹಿಡಿದುಕೊಂಡು ಬಸ್‌ ನಿಲ್ದಾಣದ ಮುಂಭಾಗ ನಿಂತಿರುವ ಹಾಗೇ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ ಗೋಪಾಲಕೃಷ್ಣ ಹಾಗೂ ಶಿವರಾಜ್‌ರವರು ಬೈಕ್‌ನಿಂದ ಬಂದು ಮುಂಭಾಗದಲ್ಲಿ ನಿಲ್ಲಿಸಿ ಒಬ್ಬರು ಬೈಕ್‌ನಿಂದ ಇಳಿದು ಬ್ಯಾಗ್ ಕಸಿದುಕೊಂಡು ಹೋಗುತ್ತಾರೆ ಅಷ್ಟು ಹೊತ್ತಿಗೆ ಹೊಸನಗರದ ಜನರು ಒಟ್ಟಾಗಿ ಸೇರಿ ಕಳ್ಳರನ್ನು ಹುಡುಕುತ್ತಾರೆ. ಅಷ್ಟು ಹೊತ್ತಿಗೆ ಕಳ್ಳರ ವೇಷದಾರಿಗಳು ಮಾವಿನಕೊಪ್ಪ ಸರ್ಕಲ್‌ಗೆ ಹೋಗಿರುತ್ತಾರೆ ಅಲ್ಲಿನ ಜನರು ಅಡ್ಡ ಹಾಕಿ ಕಳ್ಳರನ್ನು ಹಿಡಿಯುತ್ತಾರೆ. ಬ್ಯಾಗ್ ಕಳ್ಳತನವಾದ ತಕ್ಷಣ 112ಗೆ ಫೋನ್ ಮಾಡುತ್ತಾರೆ. ತಕ್ಷಣ 112 ಸಿಬ್ಬಂದಿಗಳು ಬಂದು ಕಳ್ಳತನದ ಬಗ್ಗೆ ವಿಚಾರಿಸಲಾಗಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್‌ರವರಿಗೆ ಕಳ್ಳತನವಾದ ಬಗ್ಗೆ ಮಾಹಿತಿ ನೀಡುತ್ತಾರೆ. ಶಂಕರಗೌಡ ಪಾಟೀಲ್ ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ತನಿಖೆ ಕಾರ್ಯ ನಡೆಸುತ್ತಾರೆ ತಕ್ಷಣ ಸಿಪಿಐಗೆ ಮಾಹಿತಿ ನೀಡುತ್ತಾರೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ನೇತೃತ್ವ ತಂಡ ಸ್ಥಳಕ್ಕೆ ಆಗಮಿಸಿ ಕಳ್ಳತನವಾದ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆಯುತ್ತಾರೆ. ತಕ್ಷಣ ತಾಲ್ಲೂಕಿನ ಎಲ್ಲ ಚೆಕ್ ಪೊಸ್ಟ್ಗಳಿಗೆ ಮಾಹಿತಿ ನೀಡುತ್ತಾರೆ. ಮಾಹಿತಿಯ ಬಗ್ಗೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಕಳ್ಳರ ವೇಶದಲ್ಲಿರುವ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿ ಠಾಣೆಗೆ ಕರೆತಂದು ತನಿಖೆ ನಡೆಸುತ್ತಿರುತ್ತಾರೆ. ಒಟ್ಟಾರೆ ಒಂದು ಸಿನಿಮಾ ಕಥೆಯಂತೆ ಮೂಡಿಬಂದ ಪೊಲೀಸ್ ಇಲಾಖೆಯ ಕಾರ್ಯ ಸಾರ್ವಜನಿಕರಿಗೆ ಎಚ್ಚರಿಕೆಯ ಗಂಟೆಯಾಗಿ ಜನರಿಗೆ ಜಾಗೃತಿ ಮೂಡಿಸಿದ್ದು ಹೊಸನಗರ ಪೊಲೀಸ್ ಇಲಾಖೆಯ ಎಲ್ಲ ಸಿಬ್ಬಂದಿಗಳು ಅಚ್ಚುಕಟ್ಟಾಗಿ ತಮಗೆ ನೀಡಿರುವ ಪಾತ್ರವನ್ನು ನಿರ್ವಹಿಸಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>