Hosanagara

ಹೊಸನಗರ ; ಅವಾಂತರ ಸೃಷ್ಟಿಸಿದ ಮೊದಲ ಮಳೆ – ಅಪಾರ ನಷ್ಟ, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ !

ಹೊಸನಗರ ; ಮಳೆ(ಲೆ)ನಾಡಿನ ತವರೂರು, ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ವರ್ಷದ ಮೊದಲ ಮಳೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಗಾಳಿ, ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಗಾಳಿಯ ರಭಸಕ್ಕೆ ಹಲವಾರು ಮರಗಳು ಹಾಗು ಮರದ ಕೊಂಬೆಗಳು ಮುರಿದು ಬಿದ್ದು ಅಪಾರ ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನೂರಾರು ಅಡಿಕೆ ಹಾಗೂ ತೆಂಗಿನ ಮರಗಳು ಧರಾಶಾಹಿಯಾಗಿದ್ದು ಅನ್ನದಾತರ ಪರಿಸ್ಥಿತಿ ಅಯೋಮಯವಾಗಿದೆ. ಮಳೆಯ ರಭಸ ಅತಿ ಹೆಚ್ಚಾಗಿದ್ದು ಕೆಲವು ಕಡೆ ಆಲಿಕಲ್ಲು ಮಳೆ ಬಿದ್ದ ಬಗ್ಗೆ ವರದಿಯಾಗಿದೆ.

ಪಟ್ಟಣದ ಚರ್ಚ್ ರಸ್ತೆಯ ಹಿಂಭಾಗದ ರಸ್ತೆಯಲ್ಲಿ ಮಾವಿನ ಮರ ಮುರಿದುಬಿದ್ದ ಕಾರಣ ಆ ಕುಟುಂಬ ರಾತ್ರಿ ಬೇರೆಯವರ ಮನೆಯಲ್ಲಿ ವಾಸ ಮಾಡಬೇಕಾದ ಪ್ರಸಂಗ ಸೃಷ್ಟಿಯಾಯಿತು. ಆ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಇನ್ನೂ ರಭಸದ ಗಾಳಿಗೆ ಮರಗಳು ಬಿದ್ದ ಪರಿಣಾಮ ನೂರಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು ತಾಲೂಕಿನಾದ್ಯಂತ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಇನ್ನೂ ಹುಂಚ ಹೋಬಳಿ ಕರಿಗೆರಸು ಗ್ರಾಮದ ಹಿಂಡ್ಲೆಮನೆ ರೈತ ಶ್ರೀನಿವಾಸ ಎಂಬುವರಿಗೆ ಸೇರಿದ ನೂರಾರು ಅಡಿಕೆ ಮರಗಳು ಮತ್ತು ತೆಂಗಿನಮರ ಧರೆಗುರುಳಿದ್ದು, ಕಾಳುಮೆಣಸು ಸೇರಿದಂತೆ ಇನ್ನಿತರ ಬೆಳೆ ಹಾನಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಬಿರುಗಾಳಿ ಹೊಡೆತಕ್ಕೆ ನೂರಾರು ಅಡಿಕೆ ಮರಗಳು ನೆಲಕ್ಕೆ ಬಿದ್ದಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಕ್ಷಾಂತರ ರೂ. ಸಾಲ ಮಾಡಿ ಬೆಳೆದ ಬೆಳೆ ಬಿರುಗಾಳಿಗೆ ಸಿಲುಕಿದ್ದು, ಸಂಪೂರ್ಣ ತೋಟವೇ ನಾಶವಾಗಿದೆ ಎಂದು ರೈತ ಶ್ರೀನಿವಾಸ ಅಳಲನ್ನು ತೋಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬುಧವಾರ ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಭಾಗದಲ್ಲಿ ಬೀಸಿದ ಬಿರುಗಾಳಿಗೆ ಅಡಕೆ, ತೆಂಗು ಬೆಳೆ ಹಾಳಾಗಿದ್ದು, ಸಂಬಂಧಿಸಿದ ಇಲಾಖೆ ಬೆಳೆ ನಷ್ಟವಾಗಿರುವ ರೈತರಿಗೆ ಹೆಚ್ಚಿನ ಪರಿಹಾರ ಧನ ವಿತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇನ್ನೂ ಇಂದು ಬೆಳಗ್ಗೆ 8;30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 82 ಮಿ.ಮೀ. ಮಳೆಯಾದ ವರದಿಯಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದು ಸಹ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಂಭವವಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>