ಹೊಸನಗರ ; ಹನುಮ ಜಯಂತಿ ಅಂಗವಾಗಿ ಶನಿವಾರ ಇಲ್ಲಿನ ಶ್ರೀ ವೀರಾಂಜನೇಯ ದೇವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು.
17ನೇ ವರ್ಧಂತ್ಯುತ್ಸವ ಅಂಗವಾಗಿ ಶ್ರೀ ದೇವರ ರಥೋತ್ಸವಕ್ಕೂ ಮುನ್ನ ಬೆಳಗ್ಗೆ ಗೋಪೂಜೆ, ಗಣಹೋಮ, ರಾಮತಾರಕ ಹೋಮ, ತೊಟ್ಟಿಲು ಸೇವೆ, ರುದ್ರಾಭಿಷೇಕ, ಪವಮಾನ ಅಭಿಷೇಕ, ತತ್ವಾಧಿವಾಸ ಹೋಮ ಮಹಾಮಂಗಳಾರತಿ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಸಹಿತ ಅನೇಕ ಧಾರ್ಮಿಕ ಕಾರ್ಯಗಳು ಜರುಗಿದವು.
ಸಂಜೆ ಸುರಿದ ಭಾರೀ ಮಳೆಯ ನಡುವೆಯೇ ರಥೋತ್ಸವ ನಡೆದು ನೂರಾರು ಭಕ್ತರು ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದು ವಿಶೇಷ.
ನಾದಸ್ವರ, ಚಂಡೆವಾದ್ಯ, ನೃತ್ಯ ಸಹಿತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಾಗಿ, ಭಕ್ತರು ಪರವಶರಾಗಿದ್ದು ಕಂಡು ಬಂತು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.