Categories: Hosanagara

ದುಬಾರ್‌ತಟ್ಟಿ ಶಾಲೆಗೆ ತಾತ್ಕಾಲಿಕ ಶಿಕ್ಷಕರ ನಿಯೋಜಿಸಿ ಬಿಇಒ ಆದೇಶ

ಹೊಸನಗರ : ನಗರ ಹೋಬಳಿ ದುಬಾರ್‌ತಟ್ಟಿ ಶಾಲೆಗೆ ತಾತ್ಕಾಲಿಕ ಶಿಕ್ಷಕರನ್ನು ನಿಯೋಜಿಸಿ ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಕೃಷ್ಣಮೂರ್ತಿ ಆದೇಶಿಸಿದ್ದಾರೆ.

16 ಕಿ.ಮೀ ಪಾದಯಾತ್ರೆ ಮೂಲಕ ದುಬಾರ್‌ತಟ್ಟಿ ಶಾಲೆಯ 14 ಮಕ್ಕಳು ಹಾಗೂ ಪೋಷಕರು ಎಸ್.ಡಿ.ಎಂ.ಸಿ ಸದಸ್ಯರು ಗ್ರಾಮಸ್ಥರು ಎಲ್ಲರೂ ಸೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಕುಳಿತು ಖಾಯಂ ಶಿಕ್ಷಕರು ಬೇಕೇಬೇಕೆಂದು ಇಂದು ಧರಣಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಶಿಕ್ಷಕರ ನಿಯೋಜಿಸಿ ಆದೇಶ ನೀಡಿರುವ‌ ಅವರು, ಆ ಶಾಲೆಯಲ್ಲಿ ಎರಡು ಶಿಕ್ಷಕರ ಹುದ್ದೆಗಳಿದ್ದು, ಒಂದು ಹುದ್ದೆಯಲ್ಲಿ ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೊಂದು ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹ ಶಿಕ್ಷಕರು ಸೆ.06 ರಂದು ವರ್ಗಾವಣೆ ಹೊಂದಿರುವುದರಿಂದ ಆ ಹುದ್ದೆಯು ಖಾಲಿಯಾಗಿದೆ. ಆ ಹುದ್ದೆಗೆ ಇನ್ನೊಬ್ಬ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ತಿಳಿಸಲಾಗಿದೆ. ಆದರೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಎಸ್.ಡಿಎಂ.ಸಿ ಯವರು, ಪೋಷಕರು ಒಪ್ಪುತ್ತಿಲ್ಲ, ಬದಲಾಗಿ ಖಾಯಂ ಶಿಕ್ಷಕರನ್ನೇ ಕೊಡಬೇಕೆಂದು ಪಟ್ಟುಹಿಡಿದಿದ್ದಾರೆ. ಅಲ್ಲಿಗೆ ವರ್ಗಾವಣೆಯಲ್ಲಿ ಶಿಕ್ಷಕರು ಆ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಖಾಯಂ ಶಿಕ್ಷಕರನ್ನು ಇಲಾಖೆಯಿಂದ ನೀಡಲು ಅವಕಾಶವಿಲ್ಲ.

ಇಲ್ಲಿಗೆ ಬೇರೆ ಶಾಲೆಗಳಿಂದ ನಿಯೋಜನೆ ಮಾಡಲು ಹತ್ತಿರದ ಶಾಲೆಗಳಾದ ಸರ್ಕಾರಿ ಗಂಡು ಮಕ್ಕಳ ಶಾಲೆ ನಗರ ಇಲ್ಲಿ ಇಬ್ಬರು ಖಾಯಂ ಶಿಕ್ಷಕರಿದ್ದಾರೆ ಹಾಗೆಯೇ ಪಕ್ಕದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಯೂ ಸಹ ಇಬ್ಬರು ಶಿಕ್ಷಕರ ಕಾರ್ಯನಿರ್ವಹಿಸುತ್ತಿದ್ದು ಉಳಿದ ಮೂರು ಹುದ್ದೆಗಳಲ್ಲಿ ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ಇಲ್ಲಿಯೂ ಸಹ ಶಿಕ್ಷಕರ ಕೊರತೆ ಇದೆ. ಇನ್ನೊಂದು ಪಕ್ಕದ ಶಾಲೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಸೆ ಇಲ್ಲೂ ಸಹ ಮೂರು ಖಾಯಂ ಶಿಕ್ಷಕರ ಹುದ್ದೆ ಇದ್ದು ಇಬ್ಬರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ ಒಬ್ಬರು ಶಿಕ್ಷಕರನ್ನು ಶೂನ್ಯ ಶಿಕ್ಷಕರ ಶಾಲೆಯಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಂಡೆಗದ್ದೆ ಇಲ್ಲಿಗೆ ನಿಯೋಜನೆ ಮಾಡಲಾಗಿದೆ. ಹೀಗಾಗಿ ಸುತ್ತಮುತ್ತಲಿನ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಸರ್ಕಾರಿ ಗಂಡು ಮಕ್ಕಳ ಶಾಲೆಯ ಸಹ ಶಿಕ್ಷಕಿ ಶಾಂತ ಬಿ ಎಸ್ ರವರನ್ನು ಆಡಳಿತಾತ್ಮಕ ಚಾರ್ಜ್ ವಹಿಸಿಕೊಳ್ಳಲು ತಾತ್ಕಾಲಿಕವಾಗಿ ದುಬಾರತಟ್ಟಿ ಇಲ್ಲಿಗೆ ನಿಯೋಜಿಸಿ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago