ಶಿವಮೊಗ್ಗ

ಶಿವಮೊಗ್ಗ: ಆಸ್ಪತ್ರೆ ಹಾಗೂ ಪೊಲೀಸ್ ಠಾಣೆ ಪರಿಶೀಲನೆ ನಡೆಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶನಿವಾರ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಹಿಳೆಯರಿಗೆ ಲಭ್ಯವಿರುವ ಸೌಲಭ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

InShot 20260912 150153572

ಶಿವಮೊಗ್ಗ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶನಿವಾರ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಹಿಳೆಯರಿಗೆ ಲಭ್ಯವಿರುವ ಸೌಲಭ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now

ಮೆಗ್ಗಾನ್ ರೋಗಿಗಳೊಂದಿಗೆ ಸಂವಾದ:

ಮಹಿಳಾ ಜನರಲ್ ವಾರ್ಡ್‌ಗೆ ಭೇಟಿ ನೀಡಿ, ವೈದ್ಯರ ಲಭ್ಯತೆ, ಉಚಿತ ಔಷಧ, ಶೌಚಾಲಯಗಳ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ರೋಗಿಗಳಿಂದಲೇ ನೇರವಾಗಿ ಮಾಹಿತಿ ಪಡೆದುಕೊಂಡರು.

ಬಡ ಮಹಿಳೆಗೆ ನೆರವು:

ಮಗನನ್ನು ಕಳೆದುಕೊಂಡು, ಎಪಿಎಲ್ ಕಾರ್ಡ್‌ನಿಂದಾಗಿ ಡಯಾಲಿಸಿಸ್‌ಗೆ ಪರದಾಡುತ್ತಿದ್ದ ಮಹಿಳೆಯ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಅವರು, ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಅನುಕೂಲ ಮಾಡಿಕೊಡುವಂತೆ ಸೂಚಿಸಿದರು.

ಹೊರಗಿನ ಔಷಧಿಗೆ ನಿರ್ಬಂಧ:

ರೋಗಿಗಳಿಗೆ ಯಾವುದೇ ಕಾರಣಕ್ಕೂ ಹೊರಗಿನಿಂದ ಔಷಧ ತರಲು ಚೀಟಿ ಬರೆದುಕೊಡುವಂತಿಲ್ಲ. ಆಸ್ಪತ್ರೆಯ ಇ-ಫಾರ್ಮಸಿಯಲ್ಲೇ ಔಷಧಿ ವಿತರಿಸಲು ಕಟ್ಟುನಿಟ್ಟಿನ ತಾಕೀತು ಮಾಡಿದರು.

ವರದಿಗಳ ಡಿಜಿಟಲೀಕರಣ:

ಲ್ಯಾಬ್ ಪರೀಕ್ಷೆಗಳಿಗಾಗಿ ರೋಗಿಗಳು ಅಲೆದಾಡುವುದನ್ನು ಹಾಗೂ ವರದಿ ವಿಳಂಬವಾಗುವುದನ್ನು ತಪ್ಪಿಸಲು, ವರದಿಗಳನ್ನು ಡಿಜಿಟಲೈಸ್ ಮಾಡಲು ನಿರ್ದೇಶನ ನೀಡಿದರು.

ಮೂಲಸೌಕರ್ಯ ಮತ್ತು ನೈರ್ಮಲ್ಯದ ಬಗ್ಗೆ ಎಚ್ಚರಿಕೆ

ಕೌಂಟರ್‌ಗಳ ಹೆಚ್ಚಳ:

ಗರ್ಭಿಣಿಯರು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವುದನ್ನು ತಪ್ಪಿಸಲು ನೋಂದಣಿ ಹಾಗೂ ಚಿಕಿತ್ಸಾ ಕೌಂಟರ್‌ಗಳ ಸಂಖ್ಯೆ ಹೆಚ್ಚಿಸುವಂತೆ ಸೂಚಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸ್ವಚ್ಛತೆಗೆ ಆದ್ಯತೆ :

ವಾರ್ಡ್‌ಗಳಲ್ಲಿನ ಧೂಳು, ಮುರಿದ ಕಿಟಕಿಗಳನ್ನು ತಕ್ಷಣವೇ ಸರಿಪಡಿಸಲು ಹಾಗೂ ಆಸ್ಪತ್ರೆಯ ನೈರ್ಮಲ್ಯಕ್ಕೆ ಪ್ರಥಮ ಆದ್ಯತೆ ನೀಡಲು ಆದೇಶಿಸಿದರು.

ಹೊಸ ಆಸ್ಪತ್ರೆ ಆರಂಭ:

ತಾಯಿ ಮತ್ತು ಮಕ್ಕಳಿಗಾಗಿ ನಿರ್ಮಿಸಿರುವ ನೂತನ ‘ಎಂಸಿಎಚ್’ ಆಸ್ಪತ್ರೆಯನ್ನು ಆದಷ್ಟು ಬೇಗ ಕಾರ್ಯಾರಂಭ ಮಾಡುವಂತೆ ವೈದ್ಯಕೀಯ ಅಧೀಕ್ಷಕರಿಗೆ ತಿಳಿಸಿದರು.

ಮಹಿಳಾ ಪೊಲೀಸ್ ಠಾಣೆ ವೀಕ್ಷಣೆ :

ದೂರುಗಳಿಗೆ ತ್ವರಿತ ನ್ಯಾಯ:

ಠಾಣೆಗೆ ಬರುವ ಮಹಿಳೆಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಿ, ತ್ವರಿತವಾಗಿ ನ್ಯಾಯ ಒದಗಿಸುವಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಿದರು.

ಸಹಾಯವಾಣಿ ಪ್ರದರ್ಶನ:

ಠಾಣೆಯ ಪ್ರವೇಶ ದ್ವಾರದಲ್ಲಿ ಮಹಿಳಾ ಸಹಾಯವಾಣಿ ಸಂಖ್ಯೆಗಳು ಹಾಗೂ ಕ್ಯೂಆರ್ (QR) ಕೋಡ್ ಅನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಅಳವಡಿಸಲು ನಿರ್ದೇಶಿಸಿದರು.

ಆಂತರಿಕ ದೂರು ಸಮಿತಿ:

ಲೈಂಗಿಕ ಕಿರುಕುಳ ತಡೆ ಕಾಯ್ದೆಯಡಿ ರಚಿಸಲಾದ ಸಮಿತಿಯು ಪ್ರತಿ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ವಾತಾವರಣ ಕಲ್ಪಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕ ಡಾ.ರಮೇಶ್ ಬಾಬು, ಡಿಎಚ್‌ಒ ಡಾ.ನಟರಾಜ್, ಅಧೀಕ್ಷಕ ಡಾ.ತಿಮ್ಮಪ್ಪ ಸೇರಿದಂತೆ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]