ಎರಡು ಪ್ರತ್ಯೇಕ ಪ್ರಕರಣ ; ಹಾಡಹಗಲೇ ಮನೆ ಬೀಗ ಮುರಿದು ನಗ-ನಾಣ್ಯ ದೋಚಿ ಪರಾರಿ

Written by Mahesh Hindlemane

Published on:

RIPPONPETE ; ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ ಗ್ರಾಮದ ಅಶೋಕ ಎನ್.ಎಂಬುವರ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ 24 ಗ್ರಾಂ ಚಿನ್ನಾಭರರಣ, 15 ಸಾವಿರ ನಗದು, 85 ಗ್ರಾಂ ಬೆಳ್ಳಿಯನ್ನು ಹಾಡಹಗಲೇ ಕಳವು ಮಾಡಿಕೊಂಡು ಪರಾರಿಯಾದಯಾಗಿರುವ ಘಟನೆ ನಡೆದಿದೆ‌‌.

WhatsApp Group Join Now
Telegram Group Join Now
Instagram Group Join Now

ಗದ್ದೆ ಕೆಲಸಕ್ಕಾಗಿ ತೆರಳಿದ ಆಶೋಕನ ಪತ್ನಿ ಮಧ್ಯಾಹ್ನ ಊಟಕ್ಕಾಗಿ ಮನೆಗೆ ಬಂದು ನೋಡಿದಾಗ ಬಾಗಿಲ ಬೀಗ ಒಡೆದಿರುವುದು ಕಂಡು ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಇದೇ ರೀತಿಯಲ್ಲಿ ಅದೇ ದಿನವೇ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಂಗಳವಾಡಿ ಗ್ರಾಮದ ಶ್ರೀನಾಥ್ ಎಂಬುವರ ಮನೆ ಬೀಗ ಮುರಿದು ಹಗಲು ವೇಳೆ ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದ್ದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಎರಡು ಕಡೆಯಲ್ಲಿ ಈ ರೀತಿ ಬೀಗ ಮುರಿದು ಸರಣಿ ಕಳ್ಳತನವಾಗಿರುವುದು ಇಲ್ಲಿನ ನಿವಾಸಿಗಳನ್ನು ಭಯಭೀತರನ್ನಾಗಿಸಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment