ರಿಪ್ಪನ್ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಮತ್ತು 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ಯಶಸ್ವಿಯಾಗಿ ನೆರವೇರಿತು.
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ತೋಟದಕಟ್ಟು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಹಕಾರ ಸಂಘದಲ್ಲಿ ಈ ಹಿಂದಿನ ಅವಧಿಯಲ್ಲಿ ನಡೆದಿರುವ ನಷ್ಟದ ಕುರಿತು ಸಂಘದ ಸದಸ್ಯರ ಸಮ್ಮುಖದಲ್ಲಿ ಸಾಕಷ್ಟು ಚರ್ಚೆಗಳು ನಡೆದು ಇನ್ನೂ ಮುಂದೆ ಸಂಘದ ಪ್ರಗತಿಯೊಂದಿಗೆ ಲಾಭ ಗಳಿಕೆಯತ್ತ ತರಲು ಸಂಘದ ಸದಸ್ಯರು ಸಹಕರಿಸುವಂತೆ ಮತ್ತು ರೈತರು ಸಂಘದಲ್ಲಿ ಪಡೆಯಲಾದ ಬೆಳೆ ಸಾಲ ಹಾಗೂ ಮಧ್ಯಮಾವಧಿ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿ ಸಂಘದ ಬೆಳವಣಿಗೆಗೆ ಕೈಜೋಡಿಸುವಂತಾಗಬೇಕು ಎಂದರು.
ಈ ಸಭೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಷೇರುದಾರರು ಹಾಜರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಎಸ್ ಮತ್ತು ಸಿಬ್ಬಂದಿವರ್ಗ ಪಾಲ್ಗೊಂಡಿದ್ದರು.

