ರಿಪ್ಪನ್ಪೇಟೆ ; ಕೋಡೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್ಸರ್ಕ್ಯೂಟ್ ನಿಂದಾಗಿ 8 ವರ್ಷದ ಸುಮಾರು 300 ಕ್ಕೂ ಅಧಿಕ ಅಡಿಕೆ ಗಿಡಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/181niikoES/
ರೈತ ಚಂದ್ರಶೇಖರ ಅವರ ಸ.ನಂ. 26 ರ ಅಡಿಕೆ ತೋಟದ ಸಮೀಪ ಹಾದು ಹೋಗಿರುವ ವಿದ್ಯುತ್ ಲೈನ್ ತುಂಡಾಗಿ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 8 ವರ್ಷದ ಅಡಿಕೆ ಗಿಡಗಳು ಸುಟ್ಟು ಭಸ್ಮವಾಗಿವೆ. ವಿದ್ಯುತ್ ಕಂಬ ಹಾಗೂ ಲೈನ್ ಅಪಾಯದ ಸ್ಥಿತಿಯಲ್ಲಿದ್ದು ಅಕ್ಕಪಕ್ಕದಲ್ಲಿ ಒಣಗಿದ ಮರಗಳ ಸಹಿತ ಲೈನ್ ಮೇಲೆ ಬೀಳುವ ಸ್ಥಿತಿಯಲ್ಲಿರುವ ಬಗ್ಗೆ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ಈ ಹಿಂದೆ ತರಲಾದರೂ ಯಾವುದೇ ಪ್ರಯೋಜನವಾಗಿಲ್ಲ ಇಲಾಖೆಯ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಅವಘಡ ಸಂಭವಿಸಲು ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ;
ಘಟನೆ ಸಂಭವಿಸಿದ ಸ್ಥಳಕ್ಕೆ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಹಾಗೂ ಇನ್ನಿತರರು ಭೇಟಿ ನೀಡಿ ತುರ್ತು ಪರಿಹಾರ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಒತ್ತಾಯಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





