ರಾತ್ರಿ ಇಡೀ ನಡೆದ ದಂಪತಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ !

Written by Mahesha Hindlemane

Updated on:

SHIKARIPURA ; ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳದಲ್ಲಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ದಂಪತಿ ನಡುವೆ ರಾತ್ರಿ ಇಡೀ ಜಗಳ ನಡೆದಿದ್ದು, ಬೆಳಗಿನಜಾವ ನಾಲ್ಕು ಗಂಟೆ ಸುಮಾರಿಗೆ ನಾಗರಾಜ ತನ್ನ ಪತ್ನಿ ರೇಣುಕಾಳನ್ನು ಕಂದಲಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ನಾಗರಾಜ್ ಪ್ಯಾಸೆಂಜರ್ ಆಟೋ ಓಡಿಸಿ ಜೀವನ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ.

ಮೃತ ರೇಣುಕಾಳ ಶವ ಮನೆ ಮುಂಭಾಗದಲ್ಲಿ ಪತ್ತೆಯಾಗಿದ್ದು, ಆರೋಪಿ ನಾಗರಾಜನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Comment