ರಿಪ್ಪನ್ಪೇಟೆ : ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಗೋವು ಕಳ್ಳ ಸಾಗಾಣಿಕೆ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧಿಸಿದ ಘಟನೆ ಗುರುವಾರ ನಡೆದಿದೆ.
ಪಿಎಸ್ಐ ರಾಜು ರೆಡ್ಡಿ ಹಾಗೂ ಅವರ ತಂಡ ಖಚಿತ ಮಾಹಿತಿ ಆಧರಿಸಿ KA 15 7997 ಸಂಖ್ಯೆಯ ಟಾಟಾ ಏಸ್ ವಾಹನ ಪರಿಶೀಲನೆ ನಡೆಸಿದಾಗ ಹಿಂಸಾತ್ಮಕವಾಗಿ ಎರಡು ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದನ್ನು ಪತ್ತೆ ಹಚ್ಚಿದ್ದಾರೆ.
ಈ ಕುರಿತು ವಾಹನ ಚಾಲಕ ಕೆಂಚನಾಲ ಗ್ರಾಮದ ಜಿಯಾವುಲ್ಲಾ (45) ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





