ರಿಪ್ಪನ್ಪೇಟೆ ; ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರೊಂದಿಗೆ ಅಕ್ರಮ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಇಬ್ಬರ ವಿರುದ್ದ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಸಿದ್ದಾರೆ.
ಬೆಳ್ಳೂರು ಗ್ರಾಮದ ಚಂದ್ರಪ್ಪ (60) ಮತ್ತು ಶರತ್ (40) ಶನಿವಾರ ರಾತ್ರಿ ತಮ್ಮ ಕಿರಾಣಿ ಅಂಗಡಿ ಮುಂದೆ ಸಾರ್ವಜನಿಕರಿಗೆ ಚಿಲ್ಲರೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ರಿಪ್ಪನ್ಪೇಟೆ ಪಿಎಸ್ಐ ರಾಜುರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು ಈ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.

