ಚಿರತೆ ಉಗುರು ಮತ್ತು ಹಲ್ಲುಗಳ ಅಕ್ರಮ ಸಾಗಣೆ ; ಮಾಲು ಸಮೇತ ಆರೋಪಿ ಬಂಧನ !

Written by Mahesha Hindlemane

Updated on:

SAGARA ; ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ ಆರೋಪಿಯನ್ನು ಮಾಲು ಸಮೇತ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ಗ್ರಾಮದ ಲೋಕೇಶ್ ಬಿನ್ ಭಾಗ್ಯಣ್ಣ ಬಂಧಿತ ಆರೋಪಿ. ಈತನಿಂದ 16 ಚಿರತೆ ಉಗುರು ಮತ್ತು 3 ಹಲ್ಲುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ವಿನಾಯಕ ಕೆ ಮತ್ತು ಸಿಬ್ಬಂದಿಗಳಾದ ಗಣೇಶ್, ವಿಶ್ವನಾಥ ಆಂಜನೇಯ ಮತ್ತು ದಿನೇಶ, ಪ್ರಮೋದಕುಮಾರಿ ರವರು ಎಸ್ ಎಸ್ ಕಾಶಿ ಎಸ್ಪಿ ಸಿಐಡಿ ಅರಣ್ಯ ಘಟಕ ಮಡಿಕೇರಿ ಇವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

Leave a Comment