SAGARA ; ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ ಆರೋಪಿಯನ್ನು ಮಾಲು ಸಮೇತ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ಗ್ರಾಮದ ಲೋಕೇಶ್ ಬಿನ್ ಭಾಗ್ಯಣ್ಣ ಬಂಧಿತ ಆರೋಪಿ. ಈತನಿಂದ 16 ಚಿರತೆ ಉಗುರು ಮತ್ತು 3 ಹಲ್ಲುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ಇನ್ಸ್ಪೆಕ್ಟರ್ ವಿನಾಯಕ ಕೆ ಮತ್ತು ಸಿಬ್ಬಂದಿಗಳಾದ ಗಣೇಶ್, ವಿಶ್ವನಾಥ ಆಂಜನೇಯ ಮತ್ತು ದಿನೇಶ, ಪ್ರಮೋದಕುಮಾರಿ ರವರು ಎಸ್ ಎಸ್ ಕಾಶಿ ಎಸ್ಪಿ ಸಿಐಡಿ ಅರಣ್ಯ ಘಟಕ ಮಡಿಕೇರಿ ಇವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.