Hosanagara

ಪಿಂಚಣಿ ಯೋಜನೆಗೆ ₹ 1.20 ಲಕ್ಷಕ್ಕೆ ಆದಾಯ ಮಿತಿ ಹೆಚ್ಚಳ : ಭರತ್‌ರಾಜ್

InShot 20260820 165418635

ಹೊಸನಗರ : ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗೆ ಈ ಹಿಂದೆ ₹ 32 ಸಾವಿರ ಆದಾಯ ಮಿತಿಯನ್ನು ಸರ್ಕಾರ ಘೋಷಿಸಿದ್ದು ಈಗ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್‌ ಸಾಮಾಜಿಕ ಭದ್ರತಾ ಯೋಜನೆಗೆ ಬಿಪಿಎಲ್ ಕಾರ್ಡ್‌ಗೆ ಇರುವ ಆದಾಯ ಮಿತಿಯಂತೆ ₹ 1.20 ಲಕ್ಷದೊಳಗೆ ಆದಾಯ ಮಿತಿಯಿದ್ದರೆ ಭದ್ರತಾ ಯೋಜನೆ ಪಡೆಯುವ ಫಲಾನುಭವಿಗಳು ಎಂದಿನಂತೆ ಯೋಜನೆಯ ಫಲ ಪಡೆಯಬಹುದೆಂದು ಸರ್ಕಾರದ ಸುತ್ತೋಲೆ ಹೊರಡಿಸಿದ್ದು ಅದರಂತೆ ಅರ್ಹ ಫಲಾನುಭವಿಗಳು ಎಲ್ಲ ಭದ್ರತಾ ಯೋಜನೆಗಳಿಗೆ ₹ 1.20 ಲಕ್ಷ ಅದಾಯ ಮಿತಿಯೊಳಗಿರಬೇಕೆಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸರ್ಕಾರದ ಸುತ್ತೋಲೆಯನ್ವಯ ವೃದ್ಧಾಪ್ಯ, ಅಂಗವಿಕ ಹಾಗೂ ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳು ಸಾಮಾಜಿಕ ಭದ್ರತಾ ಯೋಜನೆಗಳು ಎಂದಿನಂತೆ ಮುಂದುವರೆಯಲಿದೆ ಎಂದು ತಿಳಿಸಿದರು.

ನೋಟಿಸ್ ರದ್ದು :

ಸರ್ಕಾರದ ಸುತ್ತೋಲೆಯ ಆಧಾರದಲ್ಲಿ ಈ ಹಿಂದೆ ಸುಮಾರು ₹ 3200 ಜನರಿಗೆ ಪಿಂಚಣಿ ಹಣವನ್ನು ತಡೆ ಹಿಡಿಯಲಾಗಿದ್ದು ಅವರುಗಳಿಗೆ ನೋಟಿಸ್ ನೀಡಲಾಗಿತ್ತು ಸರ್ಕಾರದ ಸುತ್ತೋಲೆಯ ಆಧಾರದಲ್ಲಿ ನೋಟಿಸ್‌ಗಳನ್ನು ರದ್ದು ಪಡಿಸಲಾಗಿದೆ ಸಾಮಾಜಿಕ ಭದ್ರತೆ ಯೋಜನೆ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ಮುಂದಿನ ದಿನದಲ್ಲಿ ಎಂದಿನಂತೆ ಪಿಂಚಣಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾವಾಗಲಿದೆ ಎಂದು ತಿಳಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>