ಸಾಲಬಾಧೆ ; ರೈತ ಆತ್ಮಹತ್ಯೆ !

Written by Mahesha Hindlemane

Published on:

SAGARA ; ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರುಬೀಸ್ ಗ್ರಾಮದ ರಾಮಚಂದ್ರ (48) ಆತ್ಮಹತ್ಯೆ ಮಾಡಿಕೊಂಡ ರೈತ.

ಜಾಹೀರಾತು

ರಾಷ್ಟ್ರೀಕೃತ ಬ್ಯಾಂಕ್, ಫೈನಾನ್ಸ್, ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ಶಕ್ತಿ ಸಂಘ ಸೇರಿದಂತೆ ವಿವಿಧೆಡೆಗಳಲ್ಲಿ ವಿಪರೀತ ಸಾಲ ಮಾಡಿದ್ದು ಸಾಲಬಾಧೆ ತಡೆಯಲಾರದೆ ಮನೆಯ ಹಿಂಭಾಗದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment