RIPPONPETE ; ಜೈನ ಧರ್ಮದ ಆಚರಣೆಯ ಅವಿಭಾಜ್ಯ ಅಂಗವಾಗಿ ಆರಾಧನೆ, ವಿಧಾನ ಪೂಜೆಗಳನ್ನು ಆಗಮೋಕ್ತ ಶಾಸ್ತ್ರದಲ್ಲಿ ವಿವರಿಸಲಾಗಿದೆ. ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಎಂಟು ದಿನಗಳ ಪರ್ಯಂತ ಇಂದ್ರಧ್ವಜ ಮಹಾಮಂಡಲ ಆರಾಧನೆಯಲ್ಲಿ ಶ್ರಾವಕ-ಶ್ರಾವಿಕೆಯರು ಭಕ್ತಿ ಶ್ರದ್ಧೆಗಳಿಂದ ಪಾಲ್ಗೊಂಡಿರುವುದು ಆಧ್ಯಾತ್ಮಿಕ ಪಥವನ್ನು ಭದ್ರಗೊಳಿಸಬಲ್ಲುದು ಎಂದು ಕಾರ್ಕಳ ಶ್ರೀ ಜೈನ ಮಠದ ಪರಮಪೂಜ್ಯ ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಮ್ಮ ಪ್ರವಚನದಲ್ಲಿ ತಿಳಿಸಿದರು.

ಅತಿಶಯ ಪ್ರಭಾವನೆಯ ಆರಾಧನೆ-ವಿಧಾನದ ಸತ್ಪರಿಣಾಮವು ಸರ್ವರಿಗೂ ಸುಖ, ಆರೋಗ್ಯ ನೀಡುವುದು ಎಂದು ಆಶೀರ್ವದಿಸಿ ಹರಸಿದರು.
ಹೊಂಬುಜ ಶ್ರೀಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಭಟ್ಟಾರಕ ಪರಂಪರೆಯಲ್ಲಿ ಪ್ರಸಕ್ತ ಹಿರಿಯರಾಗಿರುವ ಕಾರ್ಕಳ ಸ್ವಸ್ತಿಶ್ರೀಗಳವರು ಶಾಸ್ತ್ರಧ್ಯಯನ, ಪೂಜಾ ವಿಧಿಗಳ ಬಗ್ಗೆ ನಿಖರವಾಗಿ ವಿವರಿಸುವವರು. ಅವರ ಜ್ಞಾನವು ಭಟ್ಟಾರಕರೆಲ್ಲರಿಗೂ ಲಭಿಸುತ್ತಿದೆ ಎಂದರು.

36 ವರ್ಷಗಳ ಧರ್ಮಶ್ರದ್ಧೆ ಹಾಗೂ ದೂರದರ್ಶಿತ್ವವನ್ನು ಅಭಿನಂದಿಸಿ “ಭಟ್ಟಾರಕ ಭೂಷಣ” ಉಪಾಧಿ ಅರ್ಪಿಸಿ, ಗೌರವಿಸಿದರು.
ಸೋಂದಾ ಶ್ರೀಮಠದ ಪರಮಪೂಜ್ಯ ಸ್ವಸ್ತಿಶ್ರೀ ಅಕಲಂಕಕೇಸರಿ ಭಟ್ಟಾಕಲಂಕ ಭಟ್ಟಾರಕ ಮಹಾಸ್ವಾಮೀಜಿಗಳವರು ಸನ್ಮಾನ ಪತ್ರ ವಾಚಿಸಿದರು.

ಆರ್ಯಿಕಾರತ್ನ ಶ್ರೀ 105 ಶಿವಮತಿ ಮಾತಾಜಿ, ಆರ್ಯಿಕಾ ಶ್ರೀ 105 ಪದ್ಮಶ್ರೀ ಮಾತಾಜಿಯವರು ಇಂದ್ರಧ್ವಜ ಆರಾಧನಾ ವಿಧಾನದಲ್ಲಿ ಉಪಸ್ಥಿತರಿದ್ದರು.

ಪ್ರಪ್ರಥಮವಾಗಿ ಏರ್ಪಡಿಸಿದ ಆರಾಧನಾ ವಿಧಾನದಲ್ಲಿ ಶ್ರಾವಕ-ಶ್ರಾವಕೆಯರು ವ್ರತಧಾರಿಗಳಾಗಿ ನಿಷ್ಠೆಯಿಂದ ಪಾಲ್ಗೊಂಡರು. ಜಯಮಾಲದೊಂದಿಗೆ ಸಂಪನ್ನಗೊಂಡಿತು. ಬಳಿಕ ರಜತ ರಥೋತ್ಸವ, ರಾತ್ರಿ ವಾರ್ಷಿಕ ಲಕ್ಷದೀಪೋತ್ಸವವು ಜರುಗಿತು. ಊರ ಪರವೂರ ಭಕ್ತರು ಶ್ರೀಕ್ಷೇತ್ರದ ದರ್ಶನ ಪಡೆದು, ವಿಧಾನದಲ್ಲಿ ಭಾಗಿಯಾದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ