Hosanagara

ಅಮ್ಮನಘಟ್ಟ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆಗೆ ಶ್ರೀ  ಶಾಂತಭೀಷ್ಮ ಸ್ವಾಮೀಜಿಗೆ ಆಹ್ವಾನ

ಹೊಸನಗರ ; ಸುಮಾರು 2 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ನೂತನ ಶಿಲಾಮಯ ದೇವಾಲಯ ಇದೇ ಜೂನ್ 4ರ ಬುಧವಾರ ಲೋಕಾರ್ಪಣೆಗೊಳ್ಳುವ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠಾಧ್ಯಕ್ಷ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ಅವರನ್ನು ದೇವಸ್ಥಾನ ವ್ಯವಸ್ಥಾಪನ ಸಮಿತಿ ‌ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ ಆತ್ಮೀಯವಾಗಿ ಆಮಂತ್ರಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ವೇಳೆ ಗಂಗಾಮತ ಸಮಾಜದ ತಾಲೂಕು ಅಧ್ಯಕ್ಷ ಉಮೇಶ್ ಕೆಂಚನಾಲ, ಉಮೇಶ್ ಸೊಪ್ಪಿನಮಲ್ಲೆ, ಸಮಿತಿ ಕಾರ್ಯದರ್ಶಿ ಕೋಡೂರು ಸುಧೀರ್, ಸದಸ್ಯ ಯಳಗಲ್ಲು ಪುಟ್ಟಪ್ಪ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>