ರಿಪ್ಪನ್ಪೇಟೆ ; ವಿದ್ಯಾವಂತ ಯುವಕ ಯುವತಿಯರು ಸರ್ಕಾರಿ ಉದ್ಯೋಗವನ್ನು ಅವಲಂಭಿಸದೆ ಸ್ವಾವಲಂಬಿ ಉದ್ಯೋಗದಿಂದ ಸಾಕಷ್ಟು ಲಾಭಗಳಿಸುವ ಮೂಲಕ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವೆಂದು ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಬಿ.ವೈ. ಅರುಣಾದೇವಿ ಕರೆ ನೀಡಿದರು.
ರಿಪ್ಪನ್ಪೇಟೆಯ ವೀರ ಸಾರ್ವಕರ್ ರಸ್ತೆಯಲ್ಲಿರುವ ಶ್ರೀ ದುರ್ಗಾ ಬ್ಯೂಟಿ ಪಾರ್ಲರ್ನಲ್ಲಿ ಆಯೋಜಿಸಲಾದ ಕೌಶಲ್ಯಾಭಿವೃದ್ದಿ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕೇಂದ್ರ ಸರ್ಕಾರ ಕೌಶಲ್ಯಾಭಿವೃದ್ದಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕ ಯುವತಿಯರಿಗಾಗಿ ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗಿದ್ದು ಈ ಯೋಜನೆಯಿಂದ ಶ್ರಮಿಕರಿಗಾಗಿ ವೃತ್ತಿ ಕೌಶಲ್ಯ ತರಬೇತಿಯಲ್ಲಿ ಮಹಿಳೆಯರು ಶುಭ ಕಾರ್ಯಕ್ರಮಗಳಲ್ಲಿ ಮಹಿಳೆಯರಿಗೆ ಅಲಂಕಾರ ಮಾಡುವುದು ಮತ್ತು ಹೊಲಿಗೆ ತರಬೇತಿ ಸೇರಿದಂತೆ 70ಕ್ಕೂ ಅಧಿಕ ಬಗೆಯಲ್ಲಿ ತರಬೇತಿಗಳಲ್ಲಿವೆ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಶ್ರೀ ಸಾಮಾನ್ಯರಿಗೂ ತಲುಪುವಂತಾಗಬೇಕು ಎಂದ ಅವರು, ಮುದ್ರಾ ಯೋಜನೆ ಮತ್ತು ಶ್ರಮಿಕ ಕೌಶಲ್ಯಗಳ ಕುರಿತು ಸಾಕಷ್ಟು ಯೋಜನೆಗಳಿವೆ ಇದರ ತರಬೇತಿ ಪಡೆದು ಆರ್ಥಿಕವಾಗಿ ಸ್ವಾವಲಂಬನೆ ಹೊಂದಲು ರಾಷ್ಟ್ರೀಕೃತ ಬ್ಯಾಂಕ್ಗಳ ಮೂಲಕ ಸಾಲಸೌಲಭ್ಯವನ್ನು ಪಡೆದು ಸಾಧ್ಯವೆಂದರು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಕಗ್ಗಲಿ ಲಿಂಗಪ್ಪ, ಅಂಗನವಾಡಿ ಕಾರ್ಯಕರ್ತೆ ಸರಸ್ವತಿ ರಾಘವೇಂದ್ರ, ಜಯಂತಿ ಅಶೋಕ, ಜನಶಿಕ್ಷಣ ಸಂಸ್ಥೆಯ ಅನುಷ್ಟಾನಾಧಿಕಾರಿ ಸುಮನಾ ಮತ್ತು ಸಹಾಯಕ ಅನುಷ್ಟಾನಾಧಿಕಾರಿ ಅಧಿಕಾರಿ ಶೋಭಾ ಇನ್ನಿತರರು ಪಾಲ್ಗೊಂಡಿದ್ದರು.
ತರಬೇತಿ ಶಿಬಿರದಲ್ಲಿ ಸುಮಾರು 25ಕ್ಕೂ ಅಧಿಕ ಮಹಿಳೆಯರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.