ಎಡಿಜಿಪಿ ಚಂದ್ರಶೇಖರನ್ನು ಸೇವೆಯಿಂದ ವಜಾಗೊಳಿಸುವಂತೆ ಜೆಡಿಎಸ್ ಆಗ್ರಹ

Written by malnadtimes.com

Published on:

RIPPONPETE ; ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಮೊಕದ್ದಮೆಯೊಂದರ ಹಿನ್ನಲೆಯಲ್ಲಿ ಲೋಕಯುಕ್ತ ಎಡಿಜಿಪಿ ಚಂದ್ರಶೇಖರ್ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೀಳು ಭಾಷೆಯಲ್ಲಿ ಮಾತನಾಡಿದ್ದು ಇದನ್ನು ಜಾತ್ಯಾತೀತ ಜನತಾದಳದ ವತಿಯಿಂದ ಖಂಡಿಸಿ, ಈ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸುವಂತೆ ಜಾತ್ಯಾತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್, ಜಿಲ್ಲಾ ಉಪಾಧ್ಯಕ್ಷ ಜಿ.ಎಸ್. ವರದರಾಜ್, ಹೊಸನಗರ ತಾಲ್ಲೂಕು ಅಧ್ಯಕ್ಷ ಎನ್. ವರ್ತೇಶ್ ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಗಳು, ಈ ಅಧಿಕಾರಿಯು ಈ ಹಿಂದೆ ಕೆಲಸ ನಿರ್ವಹಿಸಿದ ಎಲ್ಲಾ ಸ್ಥಳಗಳಲ್ಲಿ ಹಾಗೂ ವಿವಿಧ ಹುದ್ದೆಗಳಲ್ಲಿ ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳಿಗೆ ಇರಬೇಕಾದ ಘನತೆ, ಗೌರವಗಳಿಗೆ ವಿರುದ್ಧವಾಗಿ ವರ್ತಿಸಿದ್ದ ಅನೇಕ ಉದಾಹರಣೆಗಳಿವೆ. ಆದ್ದರಿಂದ ರಾಜ್ಯಪಾಲರು ಈ ಅಧಿಕಾರಿಯ ಸೇವಾ ವಿವರಗಳನ್ನು ತರಿಸಿಕೊಂಡು ಕಳಂಕ ಹೊತ್ತ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡುವಂತೆ ಹಾಗೂ ಇವರ ವಿರುದ್ಧ ಇರುವ ಎಲ್ಲಾ ಆರೋಪಗಳ ತನಿಖೆ ಮಾಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ಜಿಲ್ಲಾ ಜಿ.ಡಿಎಸ್ ಉಪಾಧ್ಯಕ್ಷ ಜಿ.ಎಸ್. ವರದರಾಜ್ ಆಗ್ರಹಿಸಿದ್ದಾರೆ.

Leave a Comment