ಹೊಸನಗರ

ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆ ಜಂಟಿ ಸ್ಥಳ ಪರಿಶೀಲನೆ : ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ : ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಕಂದಾಯ, ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ನಿಮ್ಮ ಗ್ರಾಮಕ್ಕೆ ಬರಲಿದ್ದು ಅವರಿಗೆ ಅಗತ್ಯ ದಾಖಲೆಗಳನ್ನು ಒದಾಗಿಸುವಂತೆ ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಆಯಾಯ ಗ್ರಾಮದ ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆಂದು ಅರಣ್ಯ ಜಮೀನು ಬಿಡುಗಡೆಗಾಗಿ ಕೇಂದ್ರ ಸರ್ಕಾರ ಹಾಗೂ ಸುಪ್ರಿಂಕೋರ್ಟ್ ಜಿಲ್ಲೆಯಲ್ಲಿ ಜಂಟಿ ತನಿಖೆ ಮತ್ತು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಿರುವುದರಿಂದ ಈ ವೇಳೆ ಪ್ರಸ್ತಾವನೆಯಲ್ಲಿನ ದಾಖಲೆ ಸ್ಕೆಚ್ ಜಿ.ಪಿ.ಎಸ್ ದತ್ತಾಂಶಗಳನ್ನು ಆಧರಿಸಿ ಪ್ರಸ್ತಾಪಿತ ಬೊಲಾಕ್ ಹಾಗೂ ಸ.ನಂ.ನಲ್ಲಿರುವ ಬ್ಲಾಕ್ ಗಡಿ ಹಾಗೂ ವಿಸ್ತೀರ್ಣವನ್ನು ಭೂಮಾಪಕರು ನೊಂದಣಿ ಮಾಡಿ ದತ್ತಾಂಶ ಸಂಗ್ರಹಿಸಲಿದ್ದಾರೆ. ಭೂ ಅನುಭೋಗದಾರ ಸ್ಥಳದಲ್ಲಿದ್ದು ತಮ್ಮ ಜಮೀನಿನ ವಿಸ್ತೀರ್ಣವನ್ನು ನೊಂದಣಿ ಮಾಡಿಕೊಂಡು ಡಿಜಿಪಿಎಸ್ ದತ್ತಾಂಶ ಹಾಗೂ ವಿಸೀರ್ಣದ ವಿವರಗಳನ್ನು ಸಂಗ್ರಹಿಸಿಕೊಂಡು ನಿಯಮಾನುಸಾರ ಕ್ರಮ ವಹಿಸಲಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಬರುವಾಗ ತಿಳಿಸಲಾಗುವುದು ನೀವು ನಮ್ಮ ಭೂದಾಖಲೆಗಳನ್ನು ಇಟ್ಟುಕೊಂಡು ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೇಳಿಕೊಂಡರು.

ಈ ಸಂದರ್ಭದಲ್ಲಿ ಶಿರಸ್ತೇದಾರ್ ಮಂಜುನಾಥ್ ಕಟ್ಟೆ, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರೆವಿನ್ಯು ಇನ್ಸ್ಪೇಕ್ಟರ್ ಆಂಜನೇಯ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>